ಮೈಸೂರು: ‘ಕಾಂಗ್ರೆಸ್ ಪಕ್ಷವನ್ನು ದುರುಪಯೋಗ ಪಡಿಸಿಕೊಳ್ಳುವವರು, ಬ್ಲ್ಯಾಕ್ಮೇಲ್ ಮಾಡುವವರಿಗೆ ಸಚಿವ ಸ್ಥಾನ ನೀಡಬಾರದು. ಅಂಥವರಿಗೆ ಪಕ್ಷ ಮಣೆ ಹಾಕಬಾರದು’ ಎಂದು ಶಾಸಕ ತನ್ವೀರ್ ಸೇಠ್ ಬುಧವಾರ ಇಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಮಲಿಂಗಾ ರೆಡ್ಡಿ, ರೋಷನ್ ಬೇಗ್ ಸೇರಿದಂತೆ ಹಿರಿಯ ನಾಯಕರ ಮಾತಿಗೆ ಪಕ್ಷ ಬೆಲೆ ನೀಡಬೇಕು. ಕೆಲಸ ಮಾಡುವವರನ್ನು ಗುರುತಿಸಬೇಕು. ಆದರೆ, ಒಬ್ಬರ ಮೇಲೊಬ್ಬರು ಟೀಕೆ ಮಾಡುವುದು ಸರಿಯಲ್ಲ’ ಎಂದರು.