ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮಾತನಾಡಿ, ಪೊಲೀಸರು ಬಿಜೆಪಿ ಮತ್ತು ಕಾಂಗ್ರೆಸ್ ಒತ್ತಡಕ್ಕೆ ಮಣಿದು ಎಸ್ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಸೈಯದ್ ಮೊಹೀಬ್, ಮುಜಾಮಿರ್ ಪಕ್ಷದ ಕಾರ್ಯಕರ್ತರಾಗಿದ್ದಾರೆ. ಇವರೊಂದಿಗೆ ಬಂಧಿಸಿರುವ ಇನ್ನಿತರ ಆರೋಪಿಗಳು ಮುಗ್ಧರು ಎಂದು ಪಕ್ಷದ ಆಂತರಿಕ ಶಿಸ್ತು ಸಮಿತಿಯ ವರದಿ ಹೇಳಿದೆ. ಹೀಗಾಗಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.