ಈ ಮಧ್ಯೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ. ಎಂ. ನಾರಾಯಣ ಸ್ವಾಮಿ ಅವರು ಸೋಮವಾರ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ, ಈಗಾಗಲೇ ಶೇಕಡ 70ರಷ್ಟು ವರ್ಗಾವಣೆ ಪ್ರಕ್ರಿಯೆ ಕೊನೆಗೊಂಡಿರುವುದರಿಂದ ಉಳಿದ ಪ್ರಕ್ರಿಯೆಯನ್ನು ಶೀಘ್ರ ಕೊನೆಗೊಳಿಸುವುದಕ್ಕೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.