ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಶನಿವಾರ ಇಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವರ್ಗಾವಣೆ ನಿಲ್ಲಿಸುವಂತೆ ನನ್ನ ಮೇಲೆ ಭಾರಿ ಒತ್ತಡ ಇದೆ. ಆದರೆ ನಾನು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗಿಲ್ಲ. ಯಾರಿಗ ನಿಜವಾಗಿಯೂ ವರ್ಗಾವಣೆ ಆಗಬೇಕೋ ಅವರಿಗೆ ನ್ಯಾಯ ಸಿಗಬೇಕು. ವರ್ಗಾವಣೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ’ ಎಂದರು.