ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ವರ್ಗಾವಣೆ ಮಸೂದೆ ಭ್ರಷ್ಟಾಚಾರಕ್ಕೆ ದಾರಿ:ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್

Last Updated 14 ಫೆಬ್ರುವರಿ 2019, 9:43 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಸಂಬಂಧಿಸಿದ ಮಸೂದೆವ್ಯಾಪಕ ಭ್ರಷ್ಟಾಚಾರಕ್ಕೆ ದಾರಿ ಮಾಡುತ್ತದೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ವಿಧಾನಪರಿಷತ್ ನಲ್ಲಿ ವಿರೋಧಿಸಿದರು.

ಮಸೂದೆಯನ್ನು ಸೆಲೆಕ್ಟ್ ಸಮಿತಿಗೆ ಒಪ್ಪಿಸಬೇಕು. ಈಗಿನ ರೂಪದಲ್ಲಿರುವ ಮಸೂದೆ ಕೆಟ್ಟದ್ದಾಗಿದೆ ಇದನ್ನು ಒಪ್ಪುವುದಕ್ಕೆ ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಸದಸ್ಯ ಎಸ್.ಆರ್. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಸೆಲೆಕ್ಟ್ ಸಮಿತಿಗೆ ಒಪ್ಪಲು ಸಾಧ್ಯವಿಲ್ಲ ಎಂದು ಸಭಾನಾಯಕಿ ಜಯಮಾಲ ಹೇಳಿದರು. ಕಲಾಪವನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದ ಕಾರಣ ಸಭಾಪತಿ ಕಲಾಪ ಅರ್ಧ ಗಂಟೆ ಕಾಲ ಮುಂದೂಡಿದರು.

ಪುಟ್ಟಣ್ಣ ಮಾತನಾಡಿ, ಮಸೂದೆಯು ಭ್ರಷ್ಟಾಚಾರಕ್ಕೆ ದಿಡ್ಡಿ ಬಾಗಿಲು ಅವಕಾಶ ಮಾಡಿದಂತಾಗುತ್ತದೆ. ವರ್ಗಾವಣೆ ದಂಧೆಯ ಏಜೆಂಟರು ಹುಟ್ಟಿಕೊಳ್ಳುತ್ತಾರೆ. ಅತ್ಯಂತ ಮಾರಕ ಮಸೂದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT