ಬೆಂಗಳೂರು: ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರವನ್ನೂ ರಜಾ ದಿನವೆಂದು ಘೋಷಿಸಿದ್ದು,ಶಿಕ್ಷಕ ಸಮುದಾಯಕ್ಕೆ ಮಾತ್ರ ಈ ಹಿಂದಿನಂತೆಯೇ 15 ದಿನಗಳ ಸಾಂದರ್ಭಿಕ ರಜೆಯನ್ನೇ ಉಳಿಸಬೇಕು ಎಂದು ಕೋರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.