ಬೆಂಗಳೂರು: ಅಖಿಲ ಭಾರತ ಶಿಕ್ಷಣ ಸಮಿತಿಯು ‘ಶಿಕ್ಷಣ ಸಮುದಾಯದ ಸಮಸ್ಯೆಗಳು ಹಾಗೂ ಪರಿಹಾರಗಳು' ಕುರಿತು ಚರ್ಚಾ ಕಾರ್ಯಕ್ರಮವನ್ನು ಫೇಸ್ಬುಕ್ ನೇರಪ್ರಸಾರದಲ್ಲಿಜೂನ್ 28ರಂದು ಸಂಜೆ 7ಕ್ಕೆ ಹಮ್ಮಿಕೊಂಡಿದೆ.
ಚರ್ಚೆಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು, ಅಜೀಂ ಪ್ರೇಮ್ಜೀ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎ.ನಾರಾಯಣ ಹಾಗೂ ತಜ್ಞರು ಭಾಗವಹಿಸಲಿದ್ದಾರೆ.
ಆಸಕ್ತರು ಸಮಿತಿಯ ಫೇಸ್ಬುಕ್ ಪುಟದಲ್ಲಿ (Save Education Committee-Karnataka) ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಬಹುದು.