ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಮೂಲಕ ವೇತನ ಪಡೆಯುವ ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಬಿಸಿಯೂಟ ಕಾರ್ಮಿಕರಿಗೆ ಮುಂದಿನ ತಿಂಗಳು ವೇತನ ಸಿಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ.
ಶನಿವಾರವರಷ್ಟೇ ಧನವಿನಿಯೋಗ ಮಸೂದೆಗೆ ಒಪ್ಪಿಗೆ ದೊರೆತಿದೆ. ಹೀಗಾಗಿ ಅಕ್ಟೋಬರ್ ತಿಂಗಳ ವೇತನ ಸಿಗುವಾಗ ಕೆಲವು ದಿನ ವಿಳಂಬವಾಗಬಹುದು. ಇದಕ್ಕೆ ಅವಕಾಶ ನೀಡಬಾರದು ಎಂದು ವಿನಂತಿಸಿದ್ದೇವೆ.ಜಿ.ಪಂ, ತಾ.ಪಂ ಮೂಲಕ ಸಂಬಳ ಪಡೆಯುವ ವರಿಗೆ ಸಮಸ್ಯೆ ಎದುರಾಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ. ಎಂ. ನಾರಾಯಣಸ್ವಾಮಿ ಹೇಳಿದರು.