<p><strong>ಬೆಂಗಳೂರು: </strong>ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಪರಸ್ಪರ, ಕೋರಿಕೆ, ಕಡ್ಡಾಯ ವರ್ಗಾವಣೆಗಳಿಗೆ ಸಂಬಂಧಪಟ್ಟ ಅರ್ಜಿ ಸಲ್ಲಿಕೆ ಇದೇ 20ರವರೆಗೆ ನಡೆಯಲಿದೆ. ಆದರೆ, ಮೊದಲ ದಿನವೇ(ಬುಧವಾರ) ಸಾಫ್ಟ್ವೇರ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅರ್ಜಿ ಸಲ್ಲಿಸಲು ಶಿಕ್ಷಕರು ಪರದಾಡಿದರು.</p>.<p>ಕೆಲವು ಜಿಲ್ಲೆಗಳಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆಗೆ ಸಮಸ್ಯೆಯಾಯಿತುಎಂದು ಶಿಕ್ಷಕರು ದೂರಿದರು. ‘ಮೊದಲ ದಿನ ಸಣ್ಣಪುಟ್ಟ ದೋಷ ಕಾಣಿಸಿಕೊಂಡಿದ್ದು, ಸರಿಪಡಿಸಲಿದ್ದೇವೆ’ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕೆಲವು ವರ್ಷಗಳ ಬಳಿಕ ಈ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ. ಆದರೆ ಈ ಬಾರಿ 10 ವರ್ಷ ಕಡ್ಡಾಯ ಸೇವೆ ಸಲ್ಲಿಸಿರಬೇಕು ಎಂಬ ನಿಯಮ ರೂಪಿಸಿರುವುದರಿಂದಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಕರಿಗೆ ಭಾರಿ ಅನ್ಯಾಯ ಆಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹೈದರಾಬಾದ್ ಕರ್ನಾಟಕದಲ್ಲಿ 371 ಜೆ ಜಾರಿಗೆ ಬಂದಿರುವುದು 2015ರಲ್ಲಿ. ಅಲ್ಲಿಂದ ನಂತರ ನೇಮಕಗೊಂಡವರಿಗೆ ಈ ನಿಯಮ ರೂಪಿಸಿದರೆ ತಪ್ಪೇನಿಲ್ಲ, ಆದರೆ ಅದಕ್ಕಿಂತ ಹಿಂದಿನವರಿಗೂ ಈ ನಿಯಮ ಕಡ್ಡಾಯಗೊಳಿಸಿದ್ದರಿಂದ 6 ಸಾವಿರಕ್ಕೂ ಅಧಿಕ ವರ್ಗಾವಣೆ ಆಕಾಂಕ್ಷಿಗಳಿಗೆ ವರ್ಗಾವಣೆಯ ಅವಕಾಶ ತಪ್ಪಿ ಹೋಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಪರಸ್ಪರ, ಕೋರಿಕೆ, ಕಡ್ಡಾಯ ವರ್ಗಾವಣೆಗಳಿಗೆ ಸಂಬಂಧಪಟ್ಟ ಅರ್ಜಿ ಸಲ್ಲಿಕೆ ಇದೇ 20ರವರೆಗೆ ನಡೆಯಲಿದೆ. ಆದರೆ, ಮೊದಲ ದಿನವೇ(ಬುಧವಾರ) ಸಾಫ್ಟ್ವೇರ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅರ್ಜಿ ಸಲ್ಲಿಸಲು ಶಿಕ್ಷಕರು ಪರದಾಡಿದರು.</p>.<p>ಕೆಲವು ಜಿಲ್ಲೆಗಳಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆಗೆ ಸಮಸ್ಯೆಯಾಯಿತುಎಂದು ಶಿಕ್ಷಕರು ದೂರಿದರು. ‘ಮೊದಲ ದಿನ ಸಣ್ಣಪುಟ್ಟ ದೋಷ ಕಾಣಿಸಿಕೊಂಡಿದ್ದು, ಸರಿಪಡಿಸಲಿದ್ದೇವೆ’ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕೆಲವು ವರ್ಷಗಳ ಬಳಿಕ ಈ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ. ಆದರೆ ಈ ಬಾರಿ 10 ವರ್ಷ ಕಡ್ಡಾಯ ಸೇವೆ ಸಲ್ಲಿಸಿರಬೇಕು ಎಂಬ ನಿಯಮ ರೂಪಿಸಿರುವುದರಿಂದಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಕರಿಗೆ ಭಾರಿ ಅನ್ಯಾಯ ಆಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹೈದರಾಬಾದ್ ಕರ್ನಾಟಕದಲ್ಲಿ 371 ಜೆ ಜಾರಿಗೆ ಬಂದಿರುವುದು 2015ರಲ್ಲಿ. ಅಲ್ಲಿಂದ ನಂತರ ನೇಮಕಗೊಂಡವರಿಗೆ ಈ ನಿಯಮ ರೂಪಿಸಿದರೆ ತಪ್ಪೇನಿಲ್ಲ, ಆದರೆ ಅದಕ್ಕಿಂತ ಹಿಂದಿನವರಿಗೂ ಈ ನಿಯಮ ಕಡ್ಡಾಯಗೊಳಿಸಿದ್ದರಿಂದ 6 ಸಾವಿರಕ್ಕೂ ಅಧಿಕ ವರ್ಗಾವಣೆ ಆಕಾಂಕ್ಷಿಗಳಿಗೆ ವರ್ಗಾವಣೆಯ ಅವಕಾಶ ತಪ್ಪಿ ಹೋಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>