‘ತಮ್ಮ ಕೊನೆಯುಸಿರಿನವರೆಗೆ ಪತಿ ಅನಂತಕುಮಾರ್ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಅದೇ ಪರಿವಾರದಿಂದ ಬಂದಿರುವ ನಾನು ಕೂಡಾ, ದೇಶ ಮೊದಲು, ಪಕ್ಷ ನಂತರ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಪಕ್ಷ ನನಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿದೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು. ಹೀಗಾಗಿ, ಯಾರೂ ನೋಟಾ ಬಳಸುವ ಅಗತ್ಯ ಇಲ್ಲ. ಎಲ್ಲರೂ ಬಿಜೆಪಿಗೆ ಮತ ನೀಡಬೇಕು. ನಾನು ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರದ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದೇನೆ. ಯಾರೊ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.