ಈ ಮೊದಲು ಎಸಿಪಿಗಳು ಹಾಗೂ ಇನ್ಸ್ಪೆಕ್ಟರ್ಗಳನ್ನು ಸಿಬಿಐ ಪ್ರಶ್ನಿಸಿತ್ತು. ಈಗ ಪ್ರತಿ ಸಂಖ್ಯೆಯನ್ನು ಇಟ್ಟುಕೊಂಡು ಯಾವ ಕಾರಣಕ್ಕೆ, ಯಾವ ಸಂದರ್ಭದಲ್ಲಿ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ಪ್ರಶ್ನಿಸುವ ಸಾಧ್ಯತೆಯಿದೆ. ಇದಾದ ಬಳಿಕ ಈ ವಿವಾದದ ಸುಳಿಗೆ ಸಿಕ್ಕಿರುವ ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಪುನಃ ವಿಚಾರಣೆಗೆ ಕರೆಯುವ ಸಂಭವವಿದೆ.