‘ನಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಮಾಡುವುದರಿಂದ ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಮತದಾನ ಮಾಡಿ ಉತ್ತಮ ವ್ಯಕ್ತಿಯನ್ನು ನಾವು ವಿಧಾನಸಭೆಗೆ ಆರಿಸುವ ಮೂಲಕ ನಮ್ಮ ಹಾಗೂ ರಾಜ್ಯದ ಅಭಿವೃದ್ಧಿಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಮತದಾನದ ಜಾಗೃತಿ ಮೂಡಿಸಲು ಶುಕ್ರವಾರ ಕೊನೆಯ ದಿನವಾಗಿದ್ದು, ಲೇಸರ್ ಷೊ, ಸಾಕ್ಷ್ಯ ಚಿತ್ರ ಹಾಗೂ ಕಿರು ನಾಟಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.