ಕೃಷ್ಣ ಭಾಗ್ಯ ಜಲ ನಿಗಮದನಾರಾಯಣಪುರ ವಲಯದ ಮುಖ್ಯ ಎಂಜಿನಿಯರ್ ಸಿ.ಕೃಷ್ಣೇಗೌಡ ಅವರಿಗೆ ನಿರ್ದೇಶನ ನೀಡಿರುವ ಸಚಿವರು, ‘ಟೆಂಡರ್ ಪ್ರಕ್ರಿಯೆಯ ಕಡತಗಳನ್ನು ನಿಗಮದ ಕಚೇರಿಯಲ್ಲಿ ವಿಸ್ತೃತವಾಗಿ ಪರಿಶೀಲಿಸಬೇಕು. ನ್ಯೂನತೆಗಳನ್ನು ಸರಿಪಡಿಸಿ ಟೆಂಡರ್ ಅಧಿಸೂಚನೆಗಳನ್ನು ಹೊರಡಿಸಬೇಕು. ಕೆಟಿಪಿಪಿ ಕಾಯ್ದೆ ಪ್ರಕಾರವೇ ಟೆಂಡರ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು’ ಎಂದಿದ್ದಾರೆ.