ಬೆಂಗಳೂರು: ‘ಬೆಂಗಳೂರು ಸುತ್ತಮುತ್ತಲಿನ ಪ್ರಮುಖ ನಗರ, ಪಟ್ಟಣಗಳನ್ನು ಸಂಪರ್ಕಿಸುವಉಪನಗರ ಹೊರ ವರ್ತುಲ ರಸ್ತೆ (ಎಸ್ಟಿಆರ್ಆರ್) ನಿರ್ಮಾಣ ಕಾರ್ಯ ಈಗಾಗಲೇ ಆರಂಭ ವಾಗಿದ್ದು, ಮೊದಲ ಹಂತದ ಭೂಸ್ವಾಧೀನಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ’ ಎಂದು ಕೇಂದ್ರ ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದರು.