ಪಾಟೀಲ ಪುಟ್ಟಪ್ಪ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ ಅವರು, 'ಪಾಪು ಕನ್ನಡ ನಾಡಿನ ಆಸ್ತಿ. ಅವರ ಕನ್ನಡದ ಸೇವೆ ಪರಿಗಣಿಸಿ ನಾಡೋಜ ಪ್ರಶಸ್ತಿ ನೀಡಲಾಗಿದೆ. ಸರಳತನದಿಂದ ಬಾಳಿ, ಬದುಕಿದ ಅವರು ನಾಡಿಗೆ ಉತ್ತಮ ಮೌಲ್ಯ ತೋರಿಸಿದ್ದರು. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ' ಎಂದು ಸಂತಾಪ ವ್ಯಕ್ತಪಡಿಸಿದರು.