<p><strong>ಬೆಂಗಳೂರು: </strong>‘ವಿದೇಶಗಳಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದ 240 ಕನ್ನಡಿಗರನ್ನು ಹೊತ್ತ ಮೊದಲ ಏರ್ ಇಂಡಿಯಾ ವಿಮಾನ ಲಂಡನ್ನಿಂದ ಹೊರಟು ಸೋಮವಾರ (ಮೇ 11) ನಸುಕಿನ 3 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ.</p>.<p>ಮೊದಲ ವಿಮಾನದಲ್ಲಿ ಬರುವ ಬಹುತೇಕ ಪ್ರಯಾಣಿಕರು ಅನಾರೋಗ್ಯ ಕಾರಣದಿಂದ ತುರ್ತಾಗಿ ತಾಯ್ನಾಡಿಗೆ ಬರುವವರು. ಅಂಥವರ ಪ್ರಯಾಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ‘ಪ್ರಜಾವಾಣಿ’ ಗೆ ತಿಳಿಸಿವೆ.</p>.<p>ಲಂಡನ್ನಲ್ಲಿ 58 ದಿನಗಳ ಹಿಂದೆ ಮೃತಪಟ್ಟ ಸಾಫ್ಟ್ವೇರ್ ಎಂಜಿನಿಯರ್ ಹುಬ್ಬಳ್ಳಿಯ ಶಿವರಾಜ ಗದೆಗೆಪ್ಪಗೌಡ ಪಾಟೀಲ ಅವರ ಪಾರ್ಥಿವ ಶರೀರವನ್ನೂ ಇದೇ ವಿಮಾನದಲ್ಲಿ ತರಲಾಗುತ್ತಿದೆ. ಪಾಟೀಲ ಅವರ ಪತ್ನಿ ಶಿವಲೀಲಾ ಪಾಟೀಲ ಮತ್ತು ಪುತ್ರ ಶಿವಾಂಗ ಪಾಟೀಲ ಈ ವಿಮಾನದಲ್ಲಿದ್ದಾರೆ.</p>.<p>ಉಳಿದಂತೆ, ಬಾವ ಮೃತಪಟ್ಟ ಕಾರಣಕ್ಕೆ ಸಂತೋಷ್, ಗಂಡ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂಬ ಕಾರಣಕ್ಕೆ ಜಯಲಕ್ಷ್ಮಿ ಸೋಮನಹಳ್ಳಿ, ಕಿರು ಅವಧಿಯ ಕೋರ್ಸ್ಗೆ ಹೋಗಿದ್ದ ವಿದ್ಯಾರ್ಥಿಗಳಾದ ರಾಮಕೃಷ್ಣ, ಅನುಷಾ, ಸಾಯಿ ಸ್ಕಂದಾ, ಅನುಪಮಾ, ಲಂಡನ್ಗೆ ಪ್ರವಾಸಕ್ಕೆ ತೆರಳಿ ಸಿಲುಕಿದ್ದ ಅಖಿಲ್ ನಾರಾಯಣ ಮತ್ತಿತರರು ಈ ವಿಮಾನದಲ್ಲಿದ್ದಾರೆ.</p>.<p>ಅಲ್ಲದೆ, ಕಾಂಗ್ರೆಸ್ ಶಾಸಕಿ ಜಯಮಾಲಾ ಅವರ ಮಗಳು ಸೌಂದರ್ಯಾ ಕೂಡಾ ಇದೇ ವಿಮಾನದಲ್ಲಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಭಾರತಕ್ಕೆ ಮರಳಲು ಲಂಡನ್ನಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಸೌಂದರ್ಯಾ ಅಲ್ಲಿ ಸಿಲುಕಿಕೊಂಡಿದ್ದರು ಎಂದೂ ಮೂಲಗಳು ತಿಳಿಸಿವೆ.</p>.<p>ಎರಡನೇ ವಿಮಾನ ಮೇ 12ರಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದೆ. ದುಬೈಯಿಂದ 200 ಕನ್ನಡಿಗರನ್ನು ಹೊತ್ತ ವಿಮಾನ ಅಲ್ಲಿಗೆ ಬರಲಿದೆ. ಕೇಂದ್ರ ಸರ್ಕಾರದ ‘ವಂದೇ ಭಾರತ್ ಮಿಷನ್‘ ಯೋಜನೆಯಡಿ ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆದುಕೊಂಡು ಬರಲಾಗುತ್ತಿದೆ.</p>.<p>ಕನ್ನಡಿಗರ ಮೊದಲ ತಂಡವನ್ನು ಸ್ವಾಗತಿಸಲು ಮತ್ತು ಪ್ರಯಾಣಿಕರ ಸಂಪೂರ್ಣ ಪರೀಕ್ಷೆ, ಸ್ಕ್ರೀನಿಂಗ್ ವ್ಯವಸ್ಥೆಗಳ ಪರಿಶೀಲನೆ ನಡೆಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಸೋಮವಾರ ಬೆಳಿಗ್ಗೆ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ವಿದೇಶಗಳಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದ 240 ಕನ್ನಡಿಗರನ್ನು ಹೊತ್ತ ಮೊದಲ ಏರ್ ಇಂಡಿಯಾ ವಿಮಾನ ಲಂಡನ್ನಿಂದ ಹೊರಟು ಸೋಮವಾರ (ಮೇ 11) ನಸುಕಿನ 3 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ.</p>.<p>ಮೊದಲ ವಿಮಾನದಲ್ಲಿ ಬರುವ ಬಹುತೇಕ ಪ್ರಯಾಣಿಕರು ಅನಾರೋಗ್ಯ ಕಾರಣದಿಂದ ತುರ್ತಾಗಿ ತಾಯ್ನಾಡಿಗೆ ಬರುವವರು. ಅಂಥವರ ಪ್ರಯಾಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ‘ಪ್ರಜಾವಾಣಿ’ ಗೆ ತಿಳಿಸಿವೆ.</p>.<p>ಲಂಡನ್ನಲ್ಲಿ 58 ದಿನಗಳ ಹಿಂದೆ ಮೃತಪಟ್ಟ ಸಾಫ್ಟ್ವೇರ್ ಎಂಜಿನಿಯರ್ ಹುಬ್ಬಳ್ಳಿಯ ಶಿವರಾಜ ಗದೆಗೆಪ್ಪಗೌಡ ಪಾಟೀಲ ಅವರ ಪಾರ್ಥಿವ ಶರೀರವನ್ನೂ ಇದೇ ವಿಮಾನದಲ್ಲಿ ತರಲಾಗುತ್ತಿದೆ. ಪಾಟೀಲ ಅವರ ಪತ್ನಿ ಶಿವಲೀಲಾ ಪಾಟೀಲ ಮತ್ತು ಪುತ್ರ ಶಿವಾಂಗ ಪಾಟೀಲ ಈ ವಿಮಾನದಲ್ಲಿದ್ದಾರೆ.</p>.<p>ಉಳಿದಂತೆ, ಬಾವ ಮೃತಪಟ್ಟ ಕಾರಣಕ್ಕೆ ಸಂತೋಷ್, ಗಂಡ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂಬ ಕಾರಣಕ್ಕೆ ಜಯಲಕ್ಷ್ಮಿ ಸೋಮನಹಳ್ಳಿ, ಕಿರು ಅವಧಿಯ ಕೋರ್ಸ್ಗೆ ಹೋಗಿದ್ದ ವಿದ್ಯಾರ್ಥಿಗಳಾದ ರಾಮಕೃಷ್ಣ, ಅನುಷಾ, ಸಾಯಿ ಸ್ಕಂದಾ, ಅನುಪಮಾ, ಲಂಡನ್ಗೆ ಪ್ರವಾಸಕ್ಕೆ ತೆರಳಿ ಸಿಲುಕಿದ್ದ ಅಖಿಲ್ ನಾರಾಯಣ ಮತ್ತಿತರರು ಈ ವಿಮಾನದಲ್ಲಿದ್ದಾರೆ.</p>.<p>ಅಲ್ಲದೆ, ಕಾಂಗ್ರೆಸ್ ಶಾಸಕಿ ಜಯಮಾಲಾ ಅವರ ಮಗಳು ಸೌಂದರ್ಯಾ ಕೂಡಾ ಇದೇ ವಿಮಾನದಲ್ಲಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಭಾರತಕ್ಕೆ ಮರಳಲು ಲಂಡನ್ನಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಸೌಂದರ್ಯಾ ಅಲ್ಲಿ ಸಿಲುಕಿಕೊಂಡಿದ್ದರು ಎಂದೂ ಮೂಲಗಳು ತಿಳಿಸಿವೆ.</p>.<p>ಎರಡನೇ ವಿಮಾನ ಮೇ 12ರಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದೆ. ದುಬೈಯಿಂದ 200 ಕನ್ನಡಿಗರನ್ನು ಹೊತ್ತ ವಿಮಾನ ಅಲ್ಲಿಗೆ ಬರಲಿದೆ. ಕೇಂದ್ರ ಸರ್ಕಾರದ ‘ವಂದೇ ಭಾರತ್ ಮಿಷನ್‘ ಯೋಜನೆಯಡಿ ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆದುಕೊಂಡು ಬರಲಾಗುತ್ತಿದೆ.</p>.<p>ಕನ್ನಡಿಗರ ಮೊದಲ ತಂಡವನ್ನು ಸ್ವಾಗತಿಸಲು ಮತ್ತು ಪ್ರಯಾಣಿಕರ ಸಂಪೂರ್ಣ ಪರೀಕ್ಷೆ, ಸ್ಕ್ರೀನಿಂಗ್ ವ್ಯವಸ್ಥೆಗಳ ಪರಿಶೀಲನೆ ನಡೆಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಸೋಮವಾರ ಬೆಳಿಗ್ಗೆ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>