‘ದೇಶದ ರಕ್ಷಣಾ ವಲಯ, ಬಾಹ್ಯಾಕಾಶ, ನಾಗರಿಕ ವಿಮಾನಯಾನ, ಅಂತರಿಕ್ಷ ಯಾನ, ಮತ್ತು ಅಂತರಿಕ್ಷ ವಲಯಗಳಲ್ಲಿ ಹೂಡಿಕೆ ಹೆಚ್ಚಾಗಿ ರಾಜ್ಯಕ್ಕೆ ಲಾಭವಾಗಲಿದೆ. ಈ ವಲಯದಲ್ಲಿ ಸಾಕಷ್ಟು ಉತ್ಪಾದನಾ ಘಟಕಗಳು ನಮ್ಮ ರಾಜ್ಯದಲ್ಲಿದ್ದು, ಅವುಗಳಿಗೆ ಪೂರಕವಾಗಿ ಇತರೆ ಸಂಬಂಧಪಟ್ಟ ಘಟಕಗಳು ಸ್ಥಾಪನೆ ಆಗುತ್ತವೆ. ಎಲ್ಲಕ್ಕೂ ಹೆಚ್ಚಾಗಿ, ಶನಿವಾರ ಪ್ರಕಟಿಸಿದ ಆರ್ಥಿಕ ಯೋಜನೆಗಳು ದೇಶದ ವಿದೇಶ ವಿನಿಮಯವನ್ನು ಉಳಿತಾಯ ಮಾಡಲಿದೆ’ ಎಂದೂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.