<p><strong>ಶ್ರವಣಬೆಳಗೊಳ:</strong> ‘ದೇವಸ್ಥಾನಗಳಲ್ಲಿ ಭಕ್ತಿ, ಪೂಜೆ ಅಭಿಷೇಕದ ಜೊತೆಗೆ ಪರೋಪಕಾರ ಮಾಡುವುದೇ ಧರ್ಮ’ ಎಂದು ಶ್ರವಣಬೆಳಗೊಳ ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.</p>.<p>‘ಅಹಿಂಸೆಯಲ್ಲಿ ಎಲ್ಲರ ರಕ್ಷಣೆ ಇದೆ. ಜೀವನ ಸುಖಮಯವಾಗಬೇಕಾದರೆ ಅಹಿಂಸೆ ಮೂಲಕ ಧರ್ಮ ಆಚರಿಸಬೇಕು. ಸಮಾಜದ ಉದ್ಧಾರವೇ ಮಠಗಳ ಗುರಿಯಾಗಬೇಕು’ಎಂದು ಭಾನುವಾರ ಆಯೋಜಿಸಿದ್ದ ದೀಕ್ಷಾ ಸುವರ್ಣ ಮಹೋತ್ಸವ ಗುರುವಂದನೆ ಕಾರ್ಯಕ್ರಮದಲ್ಲಿ ತಿಳಿಸಿದರು.</p>.<p>‘ಈ 50 ವರ್ಷಗಳು 50 ದಿನಗಳಂತೆ ಕಳೆದಿವೆ. ಈ ಅವಧಿಯಲ್ಲಿ ಭಕ್ತರು ನೀಡಿದ ಕಾಣಿಕೆಗಳನ್ನು, ಕೆರೆಯ ನೀರನು ಕೆರೆಗೆ ಚೆಲ್ಲಿ ಎಂಬಂತೆ ಭಕ್ತರ ಏಳಿಗೆಗಾಗಿಯೇ ಬಳಸಲಾಗಿದೆ’ ಎಂದರು.</p>.<p>‘ನಾವು ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡಿದ್ದರೂ ರಾಜ್ಯ, ಕೇಂದ್ರ ಸರ್ಕಾರಗಳು ಎಲ್ಲ ರೀತಿಯಲ್ಲೂ ಸಹಕರಿಸಿವೆ’ ಎಂದು ಸ್ಮರಿಸಿಕೊಂಡರು.</p>.<p>ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ, ಧರ್ಮಸ್ಥಳದ ಡಿ.ಸುರೇಂದ್ರ ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಶಾಸಕ ಸಂಜಯ್ ಪಾಟೀಲ್ ಗುರುವಂದನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ:</strong> ‘ದೇವಸ್ಥಾನಗಳಲ್ಲಿ ಭಕ್ತಿ, ಪೂಜೆ ಅಭಿಷೇಕದ ಜೊತೆಗೆ ಪರೋಪಕಾರ ಮಾಡುವುದೇ ಧರ್ಮ’ ಎಂದು ಶ್ರವಣಬೆಳಗೊಳ ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.</p>.<p>‘ಅಹಿಂಸೆಯಲ್ಲಿ ಎಲ್ಲರ ರಕ್ಷಣೆ ಇದೆ. ಜೀವನ ಸುಖಮಯವಾಗಬೇಕಾದರೆ ಅಹಿಂಸೆ ಮೂಲಕ ಧರ್ಮ ಆಚರಿಸಬೇಕು. ಸಮಾಜದ ಉದ್ಧಾರವೇ ಮಠಗಳ ಗುರಿಯಾಗಬೇಕು’ಎಂದು ಭಾನುವಾರ ಆಯೋಜಿಸಿದ್ದ ದೀಕ್ಷಾ ಸುವರ್ಣ ಮಹೋತ್ಸವ ಗುರುವಂದನೆ ಕಾರ್ಯಕ್ರಮದಲ್ಲಿ ತಿಳಿಸಿದರು.</p>.<p>‘ಈ 50 ವರ್ಷಗಳು 50 ದಿನಗಳಂತೆ ಕಳೆದಿವೆ. ಈ ಅವಧಿಯಲ್ಲಿ ಭಕ್ತರು ನೀಡಿದ ಕಾಣಿಕೆಗಳನ್ನು, ಕೆರೆಯ ನೀರನು ಕೆರೆಗೆ ಚೆಲ್ಲಿ ಎಂಬಂತೆ ಭಕ್ತರ ಏಳಿಗೆಗಾಗಿಯೇ ಬಳಸಲಾಗಿದೆ’ ಎಂದರು.</p>.<p>‘ನಾವು ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡಿದ್ದರೂ ರಾಜ್ಯ, ಕೇಂದ್ರ ಸರ್ಕಾರಗಳು ಎಲ್ಲ ರೀತಿಯಲ್ಲೂ ಸಹಕರಿಸಿವೆ’ ಎಂದು ಸ್ಮರಿಸಿಕೊಂಡರು.</p>.<p>ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ, ಧರ್ಮಸ್ಥಳದ ಡಿ.ಸುರೇಂದ್ರ ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಶಾಸಕ ಸಂಜಯ್ ಪಾಟೀಲ್ ಗುರುವಂದನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>