ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈದಿಗಳಲ್ಲಿ ಮಾನಸಿಕ ಕಾಯಿಲೆ

237 ಕೈದಿಗಳ ಸ್ಥಿತಿ ಗಂಭೀರ: ಹೈಕೋರ್ಟ್‌ಗೆ ಸರ್ಕಾರದ ವರದಿ
Last Updated 28 ಫೆಬ್ರುವರಿ 2020, 19:39 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ 15 ಸಾವಿರಕೈದಿಗಳ ಪೈಕಿ 4,916ಕ್ಕೂ ಹೆಚ್ಚು ಕೈದಿಗಳು ವಿವಿಧ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಅವರಲ್ಲಿ 237 ಕೈದಿಗಳು ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಹೈಕೋರ್ಟ್‌ನ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಈ ಕುರಿತ ಅಂಕಿ ಅಂಶಗಳನ್ನು ಒಳಗೊಂಡ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಪ್ರಮಾಣ ಪತ್ರದಲ್ಲೇನಿದೆ?: ‘ಬೆಂಗಳೂರುಕೇಂದ್ರ ಕಾರಾಗೃಹದಲ್ಲಿ ಗರಿಷ್ಠ 2,023 ಕೈದಿಗಳು ಮಾನಸಿಕ ಅಸ್ವಸ್ಥ
ತೆಗೆ ಒಳಗಾಗಿದ್ದರೆ. ಹಾಸನ ಜಿಲ್ಲಾ ಕಾರಾಗೃಹದಲ್ಲಿ 344, ಕಲಬುರ್ಗಿಯಲ್ಲಿ 336 ಹಾಗೂ ತುಮಕೂರಿನಲ್ಲಿ 237 ಮತ್ತು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ 235 ಕೈದಿಗಳು ಮಾನಸಿಕ ಅಸ್ವಸ್ಥತೆಯಿಂದ ನರಳುತ್ತಿದ್ದಾರೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಈ ಕೈದಿಗಳು ಗಂಭೀರ ಮಾನಸಿಕ ಅಸಮತೋಲನ, ಸಾಮಾನ್ಯ ಮಾನಸಿಕ ಅಸಮತೋಲನ, ಧ್ಯಾನ ಅಭಾವ ಅತಿಸಕ್ರಿಯತೆಯ ವಿಕಾರಗಳು, ಮೂರ್ಛೆರೋಗ, ಮದ್ಯವ್ಯಸನ, ತಂಬಾಕು, ಗಾಂಜಾ ಹಾಗೂ ನಶೆಯ ಪದಾರ್ಥಗಳ ಸೇವನೆಯಿಂದ ವಿಚಿತ್ರವಾಗಿ ವರ್ತಿಸುವವರಾಗಿದ್ದಾರೆ’ ಎಂದು ತಜ್ಞರು ಅಂದಾಜಿಸಿದ್ದಾರೆ.

‘ಮಾನಸಿಕ ಆರೋಗ್ಯ ರಕ್ಷಣೆ ಕಾಯ್ದೆ–2017ರ ಅನುಸಾರ ರಾಜ್ಯದಲ್ಲಿನ 46 ಜೈಲುಗಳಲ್ಲಿ 36 ಜೈಲುಗಳಲ್ಲಿರುವ ಎಲ್ಲ ಕೈದಿಗಳ ಮಾನಸಿಕ ಸ್ಥಿತಿಗಳನ್ನು ತಜ್ಞರು ಅಧ್ಯಯನ ನಡೆಸಿದ್ದಾರೆ.
ಗದಗ ಮತ್ತು ಮಂಡ್ಯ ಜಿಲ್ಲೆ ಸೇರಿದಂತೆ ನಾಲ್ಕು ತಾಲ್ಲೂಕು ಜೈಲುಗಳಲ್ಲಿ ಅಧ್ಯಯನ ಸದ್ಯ ಪ್ರಗತಿಯಲ್ಲಿದ್ದು, ಶೀಘ್ರವೇ ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಲಾಗಿದೆ.

‘ಮಾನಸಿಕ ಅಸ್ವಸ್ಥ ಕೈದಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಸಮಗ್ರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ’ ಎಂದು ಬೆಂಗಳೂರು ಕೇಂದ್ರ ಕಾರಾಗೃಹ ಮತ್ತು ಕಲಬುರ್ಗಿ ಕೇಂದ್ರ ಕಾರಾಗೃಹಗಳ ವೈದ್ಯಾಧಿಕಾರಿಗಳಿಗೆ ನಿರ್ದೇಶಿಸಿರುವ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT