<figcaption>""</figcaption>.<p><strong>ಕಲಬುರ್ಗಿ: </strong>ಜಿಲ್ಲಾಧಿಕಾರಿ ಶರತ್ ಬಿ. ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮತ್ತೆ ಆದೇಶವನ್ನು ರದ್ದುಗೊಳಿಸಿದ ಪ್ರಹಸನ ಮಂಗಳವಾರ ನಡೆಯಿತು.</p>.<p>ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆಗೊಳಿಸಲಾಗಿತ್ತು. 2012ನೇ ಬ್ಯಾಚಿನ ಐಎಎಸ್ ಅಧಿಕಾರಿ ವಿಕಾಸ್ ಕಿಶೋರ್ ಸುರಳಕರ್ ಅವರನ್ನು ಜಿಲ್ಲಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿತ್ತು. ವರ್ಗಾವಣೆ ಆದೇಶ ಹೊರಡಿಸಿದ ಬೆನ್ನಲ್ಲೇ ಶಾಸಕ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ಈ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದರು. ಅಧಿಕಾರಿಗಳ ವರ್ಗಾವಣೆಯಂತಹ ಸುಲಭ ಮಾರ್ಗದಿಂದ ಕೊರೊನಾ ನಿಯಂತ್ರಿಸಲು ಸಾಧ್ಯವಿಲ್ಲ. ಅಲ್ಲದೇ, ಇದರಿಂದ ಅಧಿಕಾರಿಗಳಲ್ಲಿ ತಪ್ಪು ಸಂದೇಶ ಹೋಗಲಿದೆ ಎಂದು ಎಚ್ಚರಿಸಿದರು.</p>.<p>ಸಾಮಾಜಿಕ ಜಾಲತಾಣಗಳಲ್ಲಿಯೂ ಜಿಲ್ಲಾಧಿಕಾರಿ ವರ್ಗಾವಣೆ ಸುದ್ದಿ ಸಾಕಷ್ಟು ಸದ್ದು ಮಾಡಿತು. ಹಲವು ಸಂಘಟನೆಗಳು ಖಂಡನಾ ಹೇಳಿಕೆಗಳನ್ನು ನೀಡಿದವು.</p>.<p>‘ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಿಸಿರುವ, ಕೊರೊನಾ ಸೋಂಕನ್ನು ನಿಯಂತ್ರಿಸಲು ನಿರಂತರವಾಗಿ ಶ್ರಮಿಸುತ್ತಿರುವ ಶರತ್ ಅವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ’ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳ ಮೂಲಕ ಹೊರಹೊಮ್ಮಿದವು.</p>.<p>‘ಕೊರೊನಾ ಸೋಂಕು ತಡೆಗೆ ಆರಂಭದಲ್ಲಿ ಉತ್ಸುಕತೆಯಿಂದ ಕೆಲಸ ಮಾಡಿದ್ದ ಜಿಲ್ಲಾಧಿಕಾರಿ ಶರತ್, ಆ ನಂತರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ’ ಎಂಬ ಆರೋಪಗಳೂ ಕೆಲವರಿಂದ ಕೇಳಿ ಬಂದವು.</p>.<p>ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರ್ಗಾವಣೆ ಆದೇಶಕ್ಕೆ ತಡೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಕಲಬುರ್ಗಿ: </strong>ಜಿಲ್ಲಾಧಿಕಾರಿ ಶರತ್ ಬಿ. ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮತ್ತೆ ಆದೇಶವನ್ನು ರದ್ದುಗೊಳಿಸಿದ ಪ್ರಹಸನ ಮಂಗಳವಾರ ನಡೆಯಿತು.</p>.<p>ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆಗೊಳಿಸಲಾಗಿತ್ತು. 2012ನೇ ಬ್ಯಾಚಿನ ಐಎಎಸ್ ಅಧಿಕಾರಿ ವಿಕಾಸ್ ಕಿಶೋರ್ ಸುರಳಕರ್ ಅವರನ್ನು ಜಿಲ್ಲಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿತ್ತು. ವರ್ಗಾವಣೆ ಆದೇಶ ಹೊರಡಿಸಿದ ಬೆನ್ನಲ್ಲೇ ಶಾಸಕ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ಈ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದರು. ಅಧಿಕಾರಿಗಳ ವರ್ಗಾವಣೆಯಂತಹ ಸುಲಭ ಮಾರ್ಗದಿಂದ ಕೊರೊನಾ ನಿಯಂತ್ರಿಸಲು ಸಾಧ್ಯವಿಲ್ಲ. ಅಲ್ಲದೇ, ಇದರಿಂದ ಅಧಿಕಾರಿಗಳಲ್ಲಿ ತಪ್ಪು ಸಂದೇಶ ಹೋಗಲಿದೆ ಎಂದು ಎಚ್ಚರಿಸಿದರು.</p>.<p>ಸಾಮಾಜಿಕ ಜಾಲತಾಣಗಳಲ್ಲಿಯೂ ಜಿಲ್ಲಾಧಿಕಾರಿ ವರ್ಗಾವಣೆ ಸುದ್ದಿ ಸಾಕಷ್ಟು ಸದ್ದು ಮಾಡಿತು. ಹಲವು ಸಂಘಟನೆಗಳು ಖಂಡನಾ ಹೇಳಿಕೆಗಳನ್ನು ನೀಡಿದವು.</p>.<p>‘ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಿಸಿರುವ, ಕೊರೊನಾ ಸೋಂಕನ್ನು ನಿಯಂತ್ರಿಸಲು ನಿರಂತರವಾಗಿ ಶ್ರಮಿಸುತ್ತಿರುವ ಶರತ್ ಅವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ’ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳ ಮೂಲಕ ಹೊರಹೊಮ್ಮಿದವು.</p>.<p>‘ಕೊರೊನಾ ಸೋಂಕು ತಡೆಗೆ ಆರಂಭದಲ್ಲಿ ಉತ್ಸುಕತೆಯಿಂದ ಕೆಲಸ ಮಾಡಿದ್ದ ಜಿಲ್ಲಾಧಿಕಾರಿ ಶರತ್, ಆ ನಂತರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ’ ಎಂಬ ಆರೋಪಗಳೂ ಕೆಲವರಿಂದ ಕೇಳಿ ಬಂದವು.</p>.<p>ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರ್ಗಾವಣೆ ಆದೇಶಕ್ಕೆ ತಡೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>