ಲಿಂಗಾಯತ ಪ್ರತ್ಯೇಕ ಧರ್ಮದ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದ ಧಾರವಾಡ ಕ್ಷೇತ್ರದ ವಿನಯ ಕುಲಕರ್ಣಿ, ಗಣಿ ನಾಡು ಬಳ್ಳಾರಿ ಜಿಲ್ಲೆಯಿಂದ ಬಂದು ಎರಡು ಬಾರಿ ಗೆಲುವು ಸಾಧಿಸಿದ್ದ ಕಲಘಟಗಿ ಕ್ಷೇತ್ರದ ಸಂತೋಷ ಲಾಡ್ ಸೋತಿರುವುದರಿಂದ ಕಾಂಗ್ರೆಸ್ ಮುಖಂಡರೇ ಅಚ್ಚರಿಗೆ ದೂಡಿದೆ. ಅವರಿಬ್ಬರನ್ನು ಸೋಲಿಸಿರುವ ಸಿ.ಎಂ. ನಿಂಬಣ್ಣವರ ಹಾಗೂ ಅಮೃತ ದೇಸಾಯಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.