ಸಿದ್ಧಗಂಗಾ ಮಠದಲ್ಲಿ ಶನಿವಾರ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನದ ನಂತರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ನೀಡಲು ಸತಾಯಿಸಿಲ್ಲ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹೊರಗಿನಿಂದ ಬಂದವರು, ಒಳಗಿನವರನ್ನು ಸಂಭಾಳಿಸಿಕೊಂಡು ಹೋಗಬೇಕಾದ ಸಂದರ್ಭ ಎದುರಾಗಿತ್ತು. ಹಾಗಾಗಿ ಅಧಿಕಾರ ಹಂಚಿಕೆ ವಿಳಂಬವಾಯಿತು. ಇಂದು ಖಾತೆ ಹಂಚಿಕೆಯಾಗುವ ಸಾಧ್ಯತೆಯಿದ್ದು, ತಮಗೆ ಯಾವುದೇ ಜವಬ್ದಾರಿ ನೀಡಿದರೂ ಸ್ವೀಕರಿಸುತ್ತೇನೆ ಎಂದರು.