ಈಚಿನ ದಿನಗಳಲ್ಲಿ ವೇತನ ವಿಳಂಬ ಎಂಬುದು ಸಾಮಾನ್ಯ ಸಂಗತಿಯಾಗಿದ್ದು, ರಾಜ್ಯದ ಹಲವಾರು ಕಡೆಗಳಲ್ಲಿ ಆಕ್ಷೇಪಗಳು ಕೇಳಿ ಬರುತ್ತಲೇ ಇವೆ. ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಗೆ ಒಳಪಟ್ಟ ಶಿಕ್ಷಕರ ಗೋಳು ಇನ್ನಷ್ಟು ಹೆಚ್ಚಿತ್ತು. ವೇತನ ವಿಳಂಬವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರೂ ಸೂಚನೆ ನೀಡಿದ್ದರು. ಅದರ ಫಲವಾಗಿ, ಡಿಡಿಪಿಐಗಳು ಸರಿಯಾಗಿ ಕಾರ್ಯನಿರ್ವಹಿಸಿದರೆ ವೇತನ ಪಾವತಿ ವಿಳಂಬವಾಗುವುದಿಲ್ಲ ಎಂಬ ಭರವಸೆಯನ್ನು ಪ್ರಧಾನ ಕಾರ್ಯದರ್ಶಿ ಅವರು ಈ ಸುತ್ತೋಲೆ ಮೂಲಕ ನೀಡಿದ್ದಾರೆ.