‘ಬಡ್ತಿಯೇ ಇಲ್ಲದೆ ಕೆಲಸ ಮಾಡುವುದು ಶೈಕ್ಷಣಿಕ ವ್ಯವಸ್ಥೆಯ ಲೋಪವಾಗಿದೆ. ಇದನ್ನು ಸರಿಪಡಿಸುವ ಭರವಸೆಯನ್ನು ನೀಡಿದ ಮೇಲೆಯೂ ನಿರೀಕ್ಷಿತ ಮಟ್ಟದಲ್ಲಿ ಅದು ಈಡೇರುತ್ತಿಲ್ಲ. ಮೂವರು ಉಪನ್ಯಾಸಕರು ಈ ತಿಂಗಳ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ. ತಾವು ಅಧಿಕಾರಕ್ಕೆ ಬಂದ ಕೂಡಲೇ ಸಮಿತಿಯ ಒತ್ತಾಯವನ್ನು ಪರಿಗಣಿಸಿ, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಾಂಶುಪಾಲ ಹುದ್ದೆಗೆ ಪದೋನ್ನತಿ ನೀಡುವ ಪ್ರಕ್ರಿಯೆಗೆ ಚಾಲನೆ ಕೊಟ್ಟು ನಿವೃತ್ತಿಯ ಅಂಚಿನಲ್ಲಿದ್ದ ಕೆಲವು ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಪದೋನ್ನತಿ ಕೊಡಿಸಿದ್ದೀರಿ. 340ಕ್ಕೂ ಅಧಿಕ ಉಪನ್ಯಾಸಕರಿಗೆ ಪದೋನ್ನತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.