ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅತಿವೃಷ್ಟಿಯಾದ ಸಂದರ್ಭಗಳಲ್ಲಿ ರಾಜ್ಯವು ಕೇಂದ್ರದ ಕದ ತಟ್ಟದಿರಲೆಂಬ ಉದ್ದೇಶದಿಂದ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ, ಪರಿಹಾರದ ಹಣಕ್ಕಾಗಿ ಹಿಂದಿನಂತೆ ಕೇಂದ್ರಕ್ಕೆ ಹೋಗುವ ಅಗತ್ಯವಿಲ್ಲ. ಆರ್ಥಿಕವಾಗಿ ಸದೃಢವಾಗಿರುವ ರಾಜ್ಯ ಸರ್ಕಾರವೇ ನೆರೆ ಪರಿಹಾರ ಘೋಷಿಸಿದೆ’ ಎಂದು ಸಮರ್ಥಿಸಿಕೊಂಡರು.