ಜನರು ಜಮಾಯಿಸಿದ್ದ ಸುದ್ದಿ ತಿಳಿದು ಕಚೇರಿಯಿಂದ ಹೊರ ಬಂದ ಸುರೇಶ ಅಂಗಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪಡಿತರ ಮೊದಲಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅವುಗಳನ್ನು ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸಲಾಗಿದೆ. ನಾನು ವೈಯಕ್ತಿಕವಾಗಿ ಆಹಾರ ಧಾನ್ಯ ಕಿಟ್ ವಿತರಿಸುತ್ತೇನೆ ಎಂದು ಎಲ್ಲಿಯೂ ತಿಳಿಸಿಲ್ಲ. ದಾನಿಗಳು ನೀಡಿದ್ದನ್ನು ಜನರಿಗೆ ಹಂಚಿದ್ದೇನೆ. ಆದಾಗ್ಯೂ ನೀವೆಲ್ಲ ಇಲ್ಲಿಗೆ ಏಕೆ ಬಂದಿರಿ’ ಎಂದು ಅಚ್ಚರಿಯಿಂದ ಕೇಳಿದರು.