ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ‘ಸಿಬ್ಬಂದಿಯ ಜೀವನ ಮಟ್ಟ ಸುಧಾರಿಸಬೇಕು ಎಂಬುದು ನನ್ನ ಉದ್ದೇಶವಾಗಿದೆ. ಆದ್ದರಿಂದ ಅವರ ವೇತನ ಹೆಚ್ಚಳ, ಆರೋಗ್ಯ ಹಾಗೂ ಶಿಕ್ಷಣಕ್ಕೆ ವಿಶೇಷ ಗಮನ ನೀಡಲಾಗುವುದು. ಈಗಾಗಲೇ ಒಳ್ಳೆಯ ಹೆಸರು ಗಳಿಸಿರುವ ಇಲಾಖೆಯನ್ನು ಇನ್ನಷ್ಟು ಬಲಪಡಿಸಲು ನನ್ನದೇ ನೀತಿಯನ್ನು ರೂಪಿಸುತ್ತೇನೆ’ ಎಂದು ಅವರು ಹೇಳಿದರು.