ಗದಗ: ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ ಅವರ ಪಾರ್ಥೀವ ಶರೀರವನ್ನು ಮಠದ ಆವರಣದಲ್ಲಿ ಭಾನುವಾರ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಮಧ್ಯಾಹ್ನ 1 ಗಂಟೆಯವರೆಗೂ ಗಣ್ಯರು ಮತ್ತು ಸಾರ್ವಜನಿಕರು ಸಿದ್ಧಲಿಂಗ ಸ್ವಾಮೀಜಿಯ ಅಂತಿಮ ದರ್ಶನ ಪಡೆಯಲಿದ್ದಾರೆ.ಬಳಿಕ ಗದಗ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವುದು. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಸಾರ್ವಜನಿಕರು, ಲಿಂಗಾಯತ ಸಮುದಾಯದ ಭಕ್ತರು, ವಿವಿಧ ಮಠಗಳ ಮಠಾಧೀಶರು ಸಿದ್ಧಲಿಂಗ ಸ್ವಾಮಿಜಿಯವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಗದಗಕ್ಕೆ ಆಗಮಿಸಿ ಸ್ವಾಮೀಜಿಯ ಅಂತಿಮ ದರ್ಶನ ಪಡೆಯಲಿದ್ದಾರೆ.