‘ಹಲವು ವರ್ಷಗಳಿಂದ ಈ ಭಾಗದ ಅನೇಕ ಯೋಜನೆಗಳು ನನೆಗುದಿಗೆ ಬಿದ್ದಿವೆ. ಇದರಿಂದ, ಸರ್ಕಾರವು ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಭಾವನೆ ಬಲಗೊಳ್ಳುತ್ತಿದೆ. ಹೀಗಾಗಿ, ಪರಿಹಾರ ಕ್ರಮಗಳನ್ನು ಕೈಕೊಂಡು ಈ ಭಾಗದ ಜನರಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕದ ಭಾವನೆಗಳು ಜಾಗ್ರತಗೊಳ್ಳದಂತೆ ನೋಡಿಕೊಳ್ಳಬೇಕು. ಇದು ತ್ವರಿತವಾಗಿ ಆಗಬೇಕಿದ್ದು, ಮುಖ್ಯಮಂತ್ರಿ ಇತ್ತ ಗಮನಹರಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.