ಹಿಂದಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ, ‘ನಿಮ್ಮ ಪಾಡಿಗೆ ನಿಮ್ಮ ಕೆಲಸ ಮಾಡಿಕೊಂಡಿರಿ. ಅನಂತಕುಮಾರ ಮುಸ್ಲಿಮರ ಬಗ್ಗೆ ಮಾತನಾಡಿದರೆ ಚೆನ್ನಾಗಿರುವುದಿಲ್ಲ. ಅವರನ್ನು ಹಾಗೂ ಇಡೀ ಕುಟುಂಬದವರನ್ನು ನೋಡಿಕೊಳ್ಳುತ್ತೇವೆ. ಅನಂತಕುಮಾರ ಹಾಗೂ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ. ನಮಗೆ ಏನು ಮಾಡಬೇಕು ಎಂದು ಗೊತ್ತಿದೆ. ಅಯೋಧ್ಯೆ ಸಮೇತ ಎಲ್ಲವೂ ನಿಮಗೇ ಬೇಕೇ? ಅಯೋಧ್ಯೆಯನ್ನು ತೆಗೆದುಕೊಳ್ಳಲು ಬಿಡುವುದಿಲ್ಲ’ ಎಂದು ಹೇಳಿದ್ದಾನೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಇದನ್ನು ಕೇಳಿದ ರೂಪಾ ಹೆಗಡೆ ಕರೆಯನ್ನು ಕಡಿತಗೊಳಿಸಿದ್ದಾರೆ.