ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಭೇಟಿ ಮಾಡಲು ಜೂನ್ 29 ರಂದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ತೆರಳಿದ್ದರು. ಈ ಸಂದರ್ಭದಲ್ಲಿ ತಾನು ಕರೆದ ತಕ್ಷಣ ವಾರ್ಡ್ಗೆ ಬಂದು ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕೆ, ಕರ್ತವ್ಯದಲ್ಲಿದ್ದ ವೈದ್ಯರ ಕೊಠಡಿಗೆ ಹೋಗಿ, ಬೆದರಿಕೆ ಒಡ್ಡಿದ್ದು, ನಿಂದಿಸಿದ್ದಾರೆ. ಇದನ್ನು ಅವರ ಆಪ್ತರ ಮೂಲಕ ವಿಡಿಯೊ ಚಿತ್ರೀಕರಣ ಮಾಡಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಡಾ. ಅರ್ಚನಾ ಅವರು ಅಂದು ಸಂಜೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.