<p><strong>ಮಂಗಳೂರು</strong>: ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಯುವಕರು, ‘ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರ ಕೈ, ಕಾಲು ಕಡಿಯುತ್ತೇವೆ’ ಎಂದು ಬೆದರಿಕೆಯ ಘೋಷಣೆಕೂಗುತ್ತಿರುವವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಕೇಸರಿ ವಸ್ತ್ರವನ್ನು ತಲೆಗೆ ಸುತ್ತಿಕೊಂಡು ಘೋಷಣೆ ಕೂಗುತ್ತಿರುವ ಯುವಕರು ತಮ್ಮ ಸುದ್ದಿಗೆ ಬರದಂತೆ ಯುಡಿಎಫ್ ಸದಸ್ಯರು ಹಾಗೂ ಶಾಸಕ ಖಾದರ್ ಅವರಿಗೆ ಮಲಯಾಳ ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ. ಫೇಸ್ಬುಕ್, ವಾಟ್ಸ್ ಆ್ಯಪ್, ಟೆಲಿಗ್ರಾಂ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೊ ತುಣುಕು ಹರಿದಾಡುತ್ತಿದೆ.</p>.<p>‘ಯುಡಿಎಫ್ನ ಹಂದಿಗಳೇ ನಮ್ಮ ಸುದ್ದಿಗೆ ಬರಬೇಡಿ. ಸುದ್ದಿಗೆ ಬಂದರೆ ಕೈ -ಕಾಲು ತೆಗೆಯುತ್ತೇವೆ. ತಲೆಯನ್ನೂ ತೆಗೆಯುತ್ತೇವೆ. ನಾಯಿ ಮಗನೆ ಖಾದರ್ ನಮ್ಮ ಸುದ್ದಿಗೆ ಬರಬೇಡ. ಸುದ್ದಿಗೆ ಬಂದರೆ ಕೈ -ಕಾಲು ತೆಗೆಯುತ್ತೇವೆ. ತಲೆಯನ್ನೂ ತೆಗೆಯುತ್ತೇವೆ...’ ಎಂದು ಕೇಕೆ ಹಾಕುತ್ತಾ ಕುಣಿಯುತ್ತಿರುವ ದೃಶ್ಯ ವಿಡಿಯೊ ತುಣುಕಿನಲ್ಲಿದೆ.</p>.<p><strong>ದೂರು ನೀಡುವುದಿಲ್ಲ</strong>: ಈ ಕುರಿತು ಪ್ರತಿಕ್ರಿಯಿಸಿದ ಯು.ಟಿ.ಖಾದರ್, ‘ಬೆದರಿಕೆ ಹಾಕಿದವರ ವಿರುದ್ಧ ನಾನು ದೂರು ನೀಡುವುದಿಲ್ಲ. ದೂರು ನೀಡಿ, ಜೈಲಿಗೆ ಕಳಿಸಬಹುದು. ಆದರೆ, ಅವರ ತಂದೆ, ತಾಯಂದಿರು ಅನುಭವಿಸುವ ಕಷ್ಟದ ಬಗ್ಗೆ ನನಗೆ ಕನಿಕರವಿದೆ’ ಎಂದರು.</p>.<p>‘ನನ್ನ ತಲೆ ಕಡಿಯುವುದರಿಂದ ಸಂತೋಷವಾಗುದಾದರೆ ಅವರು ಹೇಳಲಿ. ಎಲ್ಲಿಗೆ ಕರೆದರೂ ಬರಲು ನಾನು ಸಿದ್ಧ’ ಎಂದು ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/chitradurga/ut-khadar-701047.html" target="_blank">‘ಪೌರತ್ವ ತಿದ್ದುಪಡಿ’ ಕರುಣೆ ಇಲ್ಲದ ಕಾಯ್ದೆ: ಶಾಸಕ ಯು.ಟಿ.ಖಾದರ್ ಕಿಡಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಯುವಕರು, ‘ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರ ಕೈ, ಕಾಲು ಕಡಿಯುತ್ತೇವೆ’ ಎಂದು ಬೆದರಿಕೆಯ ಘೋಷಣೆಕೂಗುತ್ತಿರುವವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಕೇಸರಿ ವಸ್ತ್ರವನ್ನು ತಲೆಗೆ ಸುತ್ತಿಕೊಂಡು ಘೋಷಣೆ ಕೂಗುತ್ತಿರುವ ಯುವಕರು ತಮ್ಮ ಸುದ್ದಿಗೆ ಬರದಂತೆ ಯುಡಿಎಫ್ ಸದಸ್ಯರು ಹಾಗೂ ಶಾಸಕ ಖಾದರ್ ಅವರಿಗೆ ಮಲಯಾಳ ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ. ಫೇಸ್ಬುಕ್, ವಾಟ್ಸ್ ಆ್ಯಪ್, ಟೆಲಿಗ್ರಾಂ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೊ ತುಣುಕು ಹರಿದಾಡುತ್ತಿದೆ.</p>.<p>‘ಯುಡಿಎಫ್ನ ಹಂದಿಗಳೇ ನಮ್ಮ ಸುದ್ದಿಗೆ ಬರಬೇಡಿ. ಸುದ್ದಿಗೆ ಬಂದರೆ ಕೈ -ಕಾಲು ತೆಗೆಯುತ್ತೇವೆ. ತಲೆಯನ್ನೂ ತೆಗೆಯುತ್ತೇವೆ. ನಾಯಿ ಮಗನೆ ಖಾದರ್ ನಮ್ಮ ಸುದ್ದಿಗೆ ಬರಬೇಡ. ಸುದ್ದಿಗೆ ಬಂದರೆ ಕೈ -ಕಾಲು ತೆಗೆಯುತ್ತೇವೆ. ತಲೆಯನ್ನೂ ತೆಗೆಯುತ್ತೇವೆ...’ ಎಂದು ಕೇಕೆ ಹಾಕುತ್ತಾ ಕುಣಿಯುತ್ತಿರುವ ದೃಶ್ಯ ವಿಡಿಯೊ ತುಣುಕಿನಲ್ಲಿದೆ.</p>.<p><strong>ದೂರು ನೀಡುವುದಿಲ್ಲ</strong>: ಈ ಕುರಿತು ಪ್ರತಿಕ್ರಿಯಿಸಿದ ಯು.ಟಿ.ಖಾದರ್, ‘ಬೆದರಿಕೆ ಹಾಕಿದವರ ವಿರುದ್ಧ ನಾನು ದೂರು ನೀಡುವುದಿಲ್ಲ. ದೂರು ನೀಡಿ, ಜೈಲಿಗೆ ಕಳಿಸಬಹುದು. ಆದರೆ, ಅವರ ತಂದೆ, ತಾಯಂದಿರು ಅನುಭವಿಸುವ ಕಷ್ಟದ ಬಗ್ಗೆ ನನಗೆ ಕನಿಕರವಿದೆ’ ಎಂದರು.</p>.<p>‘ನನ್ನ ತಲೆ ಕಡಿಯುವುದರಿಂದ ಸಂತೋಷವಾಗುದಾದರೆ ಅವರು ಹೇಳಲಿ. ಎಲ್ಲಿಗೆ ಕರೆದರೂ ಬರಲು ನಾನು ಸಿದ್ಧ’ ಎಂದು ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/chitradurga/ut-khadar-701047.html" target="_blank">‘ಪೌರತ್ವ ತಿದ್ದುಪಡಿ’ ಕರುಣೆ ಇಲ್ಲದ ಕಾಯ್ದೆ: ಶಾಸಕ ಯು.ಟಿ.ಖಾದರ್ ಕಿಡಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>