ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇತ್ರಾವತಿ ನದಿಯಲ್ಲಿ ಮುಳುಗಿ ಮೂವರು‌ ವಿದ್ಯಾರ್ಥಿಗಳ ಸಾವು

Last Updated 1 ಜನವರಿ 2019, 5:18 IST
ಅಕ್ಷರ ಗಾತ್ರ

ಮಂಗಳೂರು: ನೇತ್ರಾವತಿ ನದಿಯಲ್ಲಿ ಮುಳುಗಿ ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮುಹಮ್ಮದ್ ಸುಹೈದ್, ಸಹೀರ್, ಫಿರ್ಝಾನ್ ಮೃತಪಟ್ಟ ವಿದ್ಯಾರ್ಥಿಗಳು. ಸೋಮವಾರ ರಾತ್ರಿ‌ ಪಿರ್ಝಾನ್ ನ ಜನ್ಮದಿನವನ್ನು ಆಚರಿಸಲು ಮೂವರು ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಕೇಕ್ ಕತ್ತರಿಸಿ, ಕೈತೊಳೆಯುವ ಸಂದರ್ಭದಲ್ಲಿ ನೀರು ಪಾಲಾಗಿದ್ದಾರೆ.

ರಾತ್ರಿ ಮನೆಗೆ ಬರದೇ ಇದ್ದುದರಿಂದ ಮಂಗಳವಾರ ಬೆಳಿಗ್ಗೆ ಪಾಲಕರು ಹುಡುಕಾಟ ನಡೆಸಿದ್ದಾರೆ. ಆದರೆ, ಬೆಳಿಗ್ಗೆ ನದಿಯಲ್ಲಿ ಶವ‌ ಪತ್ತೆಯಾಗಿವೆ. ಮೂವರೂ ಉಪ್ಪಿನಂಗಡಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ.ಕಲಿಯುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT