ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ವಿರುದ್ಧದ ಆಡಿಯೊ ವೈರಲ್‌, ಮೂವರು ಶಿಕ್ಷಕರ ಅಮಾನತಿಗೆ ಸೂಚನೆ

Last Updated 2 ಏಪ್ರಿಲ್ 2020, 12:28 IST
ಅಕ್ಷರ ಗಾತ್ರ
ADVERTISEMENT
""

ಚಿಕ್ಕಮಗಳೂರು: ‘ಸಿಎಂ ಸಾಹೇಬರೇ ಸಾರ್ವಜನಿಕರಿಂದ ಹಣ ಕೇಳಿದ್ದೀರಿ, ಹಣದ ಲಿಸ್ಟ್‌ ಇಲ್ಲಿದೆ ನೋಡಿ...’ ಆಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆಂದು ಅನುದಾನಿತ ಶಾಲೆಗಳ ಮೂವರು ಶಿಕ್ಷಕರ ವಿರುದ್ಧ ಶಿಸ್ತುಕ್ರಮಕ್ಕೆ ಸೂಚನೆ ನೀಡಲಾಗಿದೆ.

ಕಡೂರು ತಾಲ್ಲೂಕಿನ ಗುರುಕೃಪ ಪ್ರೌಢಶಾಲೆಯ ಶಿಕ್ಷಕ ಧರಣೇಂದ್ರಮೂರ್ತಿ, ಬಾಸೂರಿನ ಚನ್ನಕೇಶವ ಪ್ರೌಢಶಾಲೆಯ ಶಿಕ್ಷಕ ಸಿ.ಎಚ್‌.ಕುಮಾರ್‌ ಮತ್ತು ತರೀಕೆರೆ ತಾಲ್ಲೂಕಿನ ಅಮೃತೇಶ್ವರ ಪ್ರೌಢಶಾಲೆಯ ಶಿಕ್ಷಕ ಎಂ.ರಂಗಣ್ಣ ಅವರನ್ನು ತಕ್ಷಣದಿಂದಲೇ ಅಮಾನತಿಲ್ಲಿಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಅವರು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ವಿರುದ್ಧದ ಆಡಿಯೊವನ್ನು ಈ ಮೂವರು ವಾಟ್ಸಾಪ್‌ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ. ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ನಂಜಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT