<p><strong>ಬೆಂಗಳೂರು</strong>: ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುವಹುಬ್ಬಳ್ಳಿ–ಬೆಂಗಳೂರು ಪ್ಯಾಸೆಂಜರ್ ರೈಲು ಸೇರಿ ಮೂರು ರೈಲುಗಳ ಸಂಚಾರ ಸ್ಥಗಿತಗೊಳಿಸಲು ನೈರುತ್ಯ ರೈಲ್ವೆ ಮುಂದಾಗಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಈ ರೈಲು ಬೆಂಗಳೂರಿನಿಂದ ಬೆಳಿಗ್ಗೆ 6.15 ಹೊರಟು, ಸಂಜೆ 6.40ಕ್ಕೆ ಹುಬ್ಬಳ್ಳಿ ತಲುಪುತ್ತಿತ್ತು. ಬೆಳಿಗ್ಗೆ 9.15ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 9.15ಕ್ಕೆ ಬೆಂಗಳೂರು ತಲುಪುತ್ತಿತ್ತು. ಬೆಂಗಳೂರಿನಿಂದ ಹುಬ್ಬಳ್ಳಿಗೆ ₹85 ದರದಲ್ಲಿ ಪ್ರಯಾಣ ಮಾಡಬಹುದಾಗಿತ್ತು. ಬೆಂಗಳೂರಿನಿಂದ ಹುಬ್ಬಳ್ಳಿ ತನಕ ಹಲವು ತಾಲ್ಲೂಕು ಕೇಂದ್ರಗಳು ಮತ್ತು ಊರುಗಳಲ್ಲಿ ನಿಲುಗಡೆಗೆ ಅವಕಾಶ ಇತ್ತು. ಇಲ್ಲಿನ ಜನ ಕಡಿಮೆ ಖರ್ಚಿನಲ್ಲಿ ಸಮೀಪ–ದೂರದ ಊರಿಗೆ ಪ್ರಯಾಣಿಸಲು ಇದು ಅನುಕೂಲಕಾರಿಯಾಗಿತ್ತು.</p>.<p>ಇದರೊಂದಿಗೆ ಹುಬ್ಬಳ್ಳಿ– ಮೀರಜ್ ಎಕ್ಸ್ಪ್ರೆಸ್, ಬೆಳಗಾವಿ–ವಾಸ್ಕೋ ವಿಶೇಷ ಪ್ಯಾಸೆಂಜರ್ ರೈಲು ಸಂಚಾರವನ್ನು ರದ್ದುಗೊಳಿಸಲು ರೈಲ್ವೆ ಮಂಡಳಿಗೆ ನೈರುತ್ಯ ರೈಲ್ವೆ ಪ್ರಸ್ತಾವನೆ ಸಲ್ಲಿಸಿದೆ.</p>.<p>‘ಹುಬ್ಬಳ್ಳಿ–ಮೀರಜ್ ಎಕ್ಸ್ಪ್ರೆಸ್ ರೈಲು 1995ರಿಂದ ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ಅನುಕೂಲಕರವಾಗಿದೆ. ವಾಸ್ಕೋ–ಬೆಳಗಾವಿ ನಡುವಿನ ರೈಲಿನಿಂದ ಅಷ್ಟೇನೂ ಪ್ರಯೋಜನ ಇಲ್ಲ. ಆದರೆ, ಉಳಿದೆರಡು ರೈಲುಗಳ ಸಂಚಾರ ಸ್ಥಗಿತಗೊಳಿಸಬಾರದು’ ಎಂದು ರೈಲ್ವೆ ಹೋರಾಟಗಾರ ಕೃಷ್ಣ ಪ್ರಸಾದ್ ಒತ್ತಾಯಿಸಿದರು.</p>.<p>‘ಈ ರೈಲುಗಳ ಬದಲಿಗೆ ಬೇರೆ ರೈಲುಗಳು ಸಂಚರಿಸುತ್ತಿವೆ. ಪ್ರಯಾಣಿಕರಿಗೆ ತೊಂದರೆ ಆಗುವುದಿಲ್ಲ. ಇದು ಇಲಾಖೆಯ ಆಂತರಿಕ ವಿಷಯ’ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದರು.</p>.<p>ಆರ್ಥಿಕವಾಗಿ ಲಾಭದಾಯಕವಲ್ಲ ಎಂಬ ಕಾರಣಕ್ಕೆತಿಪಟೂರಿನಲ್ಲಿ 12 ರೈಲು, ಪಾಂಡವಪುರದಲ್ಲಿ 16 ರೈಲು, ಬಂಟ್ವಾಳದಲ್ಲಿ 5 ರೈಲುಗಳು ಸೇರಿ ವಿವಿಧ ನಿಲ್ದಾಣಗಳಲ್ಲಿ ಒಟ್ಟು 40 ರೈಲುಗಳ ನಿಲುಗಡೆಯನ್ನೂ ರದ್ದುಪಡಿಸಲು ಇಲಾಖೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುವಹುಬ್ಬಳ್ಳಿ–ಬೆಂಗಳೂರು ಪ್ಯಾಸೆಂಜರ್ ರೈಲು ಸೇರಿ ಮೂರು ರೈಲುಗಳ ಸಂಚಾರ ಸ್ಥಗಿತಗೊಳಿಸಲು ನೈರುತ್ಯ ರೈಲ್ವೆ ಮುಂದಾಗಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಈ ರೈಲು ಬೆಂಗಳೂರಿನಿಂದ ಬೆಳಿಗ್ಗೆ 6.15 ಹೊರಟು, ಸಂಜೆ 6.40ಕ್ಕೆ ಹುಬ್ಬಳ್ಳಿ ತಲುಪುತ್ತಿತ್ತು. ಬೆಳಿಗ್ಗೆ 9.15ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 9.15ಕ್ಕೆ ಬೆಂಗಳೂರು ತಲುಪುತ್ತಿತ್ತು. ಬೆಂಗಳೂರಿನಿಂದ ಹುಬ್ಬಳ್ಳಿಗೆ ₹85 ದರದಲ್ಲಿ ಪ್ರಯಾಣ ಮಾಡಬಹುದಾಗಿತ್ತು. ಬೆಂಗಳೂರಿನಿಂದ ಹುಬ್ಬಳ್ಳಿ ತನಕ ಹಲವು ತಾಲ್ಲೂಕು ಕೇಂದ್ರಗಳು ಮತ್ತು ಊರುಗಳಲ್ಲಿ ನಿಲುಗಡೆಗೆ ಅವಕಾಶ ಇತ್ತು. ಇಲ್ಲಿನ ಜನ ಕಡಿಮೆ ಖರ್ಚಿನಲ್ಲಿ ಸಮೀಪ–ದೂರದ ಊರಿಗೆ ಪ್ರಯಾಣಿಸಲು ಇದು ಅನುಕೂಲಕಾರಿಯಾಗಿತ್ತು.</p>.<p>ಇದರೊಂದಿಗೆ ಹುಬ್ಬಳ್ಳಿ– ಮೀರಜ್ ಎಕ್ಸ್ಪ್ರೆಸ್, ಬೆಳಗಾವಿ–ವಾಸ್ಕೋ ವಿಶೇಷ ಪ್ಯಾಸೆಂಜರ್ ರೈಲು ಸಂಚಾರವನ್ನು ರದ್ದುಗೊಳಿಸಲು ರೈಲ್ವೆ ಮಂಡಳಿಗೆ ನೈರುತ್ಯ ರೈಲ್ವೆ ಪ್ರಸ್ತಾವನೆ ಸಲ್ಲಿಸಿದೆ.</p>.<p>‘ಹುಬ್ಬಳ್ಳಿ–ಮೀರಜ್ ಎಕ್ಸ್ಪ್ರೆಸ್ ರೈಲು 1995ರಿಂದ ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ಅನುಕೂಲಕರವಾಗಿದೆ. ವಾಸ್ಕೋ–ಬೆಳಗಾವಿ ನಡುವಿನ ರೈಲಿನಿಂದ ಅಷ್ಟೇನೂ ಪ್ರಯೋಜನ ಇಲ್ಲ. ಆದರೆ, ಉಳಿದೆರಡು ರೈಲುಗಳ ಸಂಚಾರ ಸ್ಥಗಿತಗೊಳಿಸಬಾರದು’ ಎಂದು ರೈಲ್ವೆ ಹೋರಾಟಗಾರ ಕೃಷ್ಣ ಪ್ರಸಾದ್ ಒತ್ತಾಯಿಸಿದರು.</p>.<p>‘ಈ ರೈಲುಗಳ ಬದಲಿಗೆ ಬೇರೆ ರೈಲುಗಳು ಸಂಚರಿಸುತ್ತಿವೆ. ಪ್ರಯಾಣಿಕರಿಗೆ ತೊಂದರೆ ಆಗುವುದಿಲ್ಲ. ಇದು ಇಲಾಖೆಯ ಆಂತರಿಕ ವಿಷಯ’ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದರು.</p>.<p>ಆರ್ಥಿಕವಾಗಿ ಲಾಭದಾಯಕವಲ್ಲ ಎಂಬ ಕಾರಣಕ್ಕೆತಿಪಟೂರಿನಲ್ಲಿ 12 ರೈಲು, ಪಾಂಡವಪುರದಲ್ಲಿ 16 ರೈಲು, ಬಂಟ್ವಾಳದಲ್ಲಿ 5 ರೈಲುಗಳು ಸೇರಿ ವಿವಿಧ ನಿಲ್ದಾಣಗಳಲ್ಲಿ ಒಟ್ಟು 40 ರೈಲುಗಳ ನಿಲುಗಡೆಯನ್ನೂ ರದ್ದುಪಡಿಸಲು ಇಲಾಖೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>