ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್‌ ಹಂಚಿಕೆ: ಬಿಎಸ್‌ವೈ ಇಂದು ದೆಹಲಿಗೆ

Last Updated 7 ಮಾರ್ಚ್ 2019, 20:03 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಟಿಕೆಟ್‌ ಹಂಚಿಕೆ ಬಗ್ಗೆ ವರಿಷ್ಠರ ಜತೆಗೆ ಚರ್ಚೆ ನಡೆಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ನವದೆಹಲಿಗೆ ತೆರಳಲಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವರು. ಈ ವೇಳೆ, ತಾವು ಸಿದ್ಧಪಡಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಯಡಿಯೂರಪ್ಪ ಸಲ್ಲಿಸಲಿದ್ದಾರೆ.

ಅಮಿತ್‌ ಶಾ ಅವರು ಏಳು ಖಾಸಗಿ ಏಜೆನ್ಸಿಗಳಿಂದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯ ವರದಿ ಸಹ ಅವರಲ್ಲಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉಡುಪಿ–ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಸಂಸದರ ಸಾಧನೆ ಬಗ್ಗೆ ಪಕ್ಷದ ವಲಯದಲ್ಲೇ ಅಸಮಾಧಾನ ಇದೆ. ಒಂದು ವೇಳೆ ಈ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್‌ ನೀಡಿದರೆ ಗೆಲುವಿನ ಆಸೆ ಕೈಬಿಡಬೇಕು ಎಂದು ಕೆಲವು ನಾಯಕರು ಎಚ್ಚರಿಕೆ ನೀಡಿದ್ದಾರೆ. 3–4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT