ಉಡುಪಿ–ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಸಂಸದರ ಸಾಧನೆ ಬಗ್ಗೆ ಪಕ್ಷದ ವಲಯದಲ್ಲೇ ಅಸಮಾಧಾನ ಇದೆ. ಒಂದು ವೇಳೆ ಈ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡಿದರೆ ಗೆಲುವಿನ ಆಸೆ ಕೈಬಿಡಬೇಕು ಎಂದು ಕೆಲವು ನಾಯಕರು ಎಚ್ಚರಿಕೆ ನೀಡಿದ್ದಾರೆ. 3–4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.