ಹುಲಿಯ ಸೊಂಟದ ಭಾಗದಲ್ಲಿ ಗಾಯವಾಗಿತ್ತು. ಸೋಂಕಿನಿಂದ ನಿಶಕ್ತಿಗೊಂಡು ಬಳಲುತ್ತಿತ್ತು ಎನ್ನಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯು ಸೆರೆ ಹಿಡಿಯಲು ಪ್ರಯತ್ನಿಸಿದಾಗಲೂ ಓಡಲು ಅದಕ್ಕೆ ಸಾಧ್ಯವಾಗಲಿಲ್ಲ. ಹೀಗಾಗಿ, ಚಿಕಿತ್ಸೆಗೆಂದು ಮೈಸೂರಿನ ಚಾಮುಂಡಿ ವನ್ಯಜೀವಿ ಸಂರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಸಾಗಿಸಲು ನಿರ್ಧರಿಸಲಾಗಿತ್ತು.