ಲೋಕಸಭೆ ಚುನಾವಣೆ ತಯಾರಿ ನೆಪದಲ್ಲಿ ಬಿಜೆಪಿ ಶಾಸಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದ್ದು, ನಂತರ ಅವರನ್ನು ಹರಿಯಾಣದ ಗುರುಗ್ರಾಮದ ಐಟಿಸಿ ಗ್ರ್ಯಾಂಡ್ ಭಾರತ್ ರೆಸಾರ್ಟ್ನಲ್ಲಿ ಇರಿಸಲಾಗಿದೆ. ಮೂರ್ನಾಲ್ಕು ದಿನಗಳಿಂದ ಶಾಸಕರು ಅಲ್ಲೇ ತಂಗಿದ್ದು, ಈ ಬೆಳವಣಿಗೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹರಿಯಾಣ ಸೇರಿದಂತೆ ವಿವಿದೆಡೆ ಪ್ರತಿಭಟನೆ ನಡೆಸಿದ್ದಾರೆ.