‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವೂ ಜಯಂತಿ ಆಚರಣೆಗೆ ಮುಂದಾಗಿರುವುದು ವಿಷಾದನೀಯ. ಬಲವಂತದಿಂದ ಕಾರ್ಯಕ್ರಮ ನಡೆಸಿದರೆ ಅಂದು ಕೊಡಗಿನಲ್ಲಿ ಕರಾಳ ದಿನ ಆಚರಣೆ ಮಾಡುತ್ತೇವೆ’ ಎಂದು ಸಮಿತಿ ಸಂಚಾಲಕ ಅಭಿಮನ್ಯು ಕುಮಾರ್ ತಿಳಿಸಿದರು.