ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯವರಿಂದ ಟಿಪ್ಪು ಜಯಂತಿ ಬೇಕಿರಲೂ ಇಲ್ಲ: ತನ್ವೀರ್‌ ಸೇಠ್‌

Last Updated 1 ಆಗಸ್ಟ್ 2019, 19:19 IST
ಅಕ್ಷರ ಗಾತ್ರ

ಮೈಸೂರು: ‘ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸಿ ಎಂದು ನಾವು ಯಾವುದೇ ಸರ್ಕಾರವನ್ನೂ ಕೇಳಿರಲಿಲ್ಲ. ಯಡಿಯೂರಪ್ಪ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿದ್ದರಿಂದ ಬೇಸರವಿಲ್ಲ. ಬಿಜೆಪಿಯವರಿಂದ ಜಯಂತಿ ಆಚರಣೆ ಬೇಕಿರಲೂ ಇಲ್ಲ’ ಎಂದು ಶಾಸಕ ತನ್ವೀರ್‌ ಸೇಠ್‌ ಇಲ್ಲಿ ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಲಿದೆ ಎಂಬುದು ಎಲ್ಲರಿಗೂ ತಿಳಿದಿತ್ತು. ಆದರೆ, ಇದೇ ವಿಷಯ ಸರ್ಕಾರದ ಆದ್ಯತೆ ಎಂಬುದು ನಮಗೆ ಗೊತ್ತಿರಲಿಲ್ಲ. ಟಿಪ್ಪು ಹೆಸರನ್ನು ರಾಜಕೀಯ ಉದ್ದೇಶಕ್ಕೆ ಬಳಸುತ್ತಿರುವುದು ದೊಡ್ಡ ದುರಂತ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT