ಪೇಜಾವರ ಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಟಿಪ್ಪು ಉತ್ತಮ ಆಡಳಿತ ಕೊಟ್ಟಿದ್ದಾನೆ. ಆಡಳಿತದಲ್ಲಿ ಸುಧಾರಣೆ ತಂದಿದ್ದಾನೆ. ಹಾಗೆಯೇ ವಿವಾದಿತ ವ್ಯಕ್ತಿ ಕೂಡ. ಕೊಡಗಿನವರ ಹಾಗೂ ಕ್ರೈಸ್ತರ ಹತ್ಯಾಕಾಂಡ ನಡೆಸಿರುವುದು ಇತಿಹಾಸದಲ್ಲಿ ದಾಖಲಾಗಿದೆ. ಹಾಗಾಗಿ, ಟಿಪ್ಪುವಿನ ಎರಡೂ ಮುಖಗಳನ್ನು ಪಠ್ಯದಲ್ಲಿ ದಾಖಲಿಸಬೇಕು. ಇತಿಹಾಸದಲ್ಲಿ ಸತ್ಯಾಂಶ ಇರಬೇಕೇ ಹೊರತು, ಅತಿಶಯೋಕ್ತಿ ಇರಬಾರದು’ ಎಂದು ಅಭಿಪ್ರಾಯಪಟ್ಟರು.