‘ಜಿಲ್ಲಾ ನ್ಯಾಯಾಧೀಶರ ನೇಮಕ ಸಂದರ್ಭ ಲಿಖಿತ ಪರೀಕ್ಷೆಯ ಅಂಕ ಹಾಗೂ ಮೌಖಿಕ ಪರೀಕ್ಷೆಯ ಅಂಕಗಳೆರಡನ್ನೂ ಪರಿಗಣಿಸಬೇಕು’ ಎಂಬ ನ್ಯಾಯಮೂರ್ತಿ ಶೆಟ್ಟಿ ಆಯೋಗದ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್ ಈಗಾಗಲೇ ಒಪ್ಪಿಕೊಂಡಿದೆ. ಆದರೆ, ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ, ಮೌಖಿಕ ಪರೀಕ್ಷೆ ಎದುರಿಸಿರುವ ಅರ್ಜಿದಾರರನ್ನು ನೇಮಕಕ್ಕೆ ಪರಿಗಣಿಸಲಾಗಿಲ್ಲ. ಸೇವಾ ನಿಮಯ ಮತ್ತು ಮಾನದಂಡಗಳಿಗೆ ಸಂಬಂಧಿಸಿದ ಇದೇ ಮಾದರಿಯ ಕೆಲವು ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠಕ್ಕೆ ವಹಿಸಲಾಗಿದೆ. ಈ ಮೇಲ್ಮನವಿಯ ವಿಚಾರಣೆಯನ್ನು ತೀರ್ಪು ಹೊರಬರುವವರೆಗೆ ಬಾಕಿ ಇರಿಸಬೇಕು ಎಂದು ಅರ್ಜಿದಾರರ ಪರ ವಕೀಲರಾದ ಕೆ.ವಿ. ವಿಶ್ವನಾಥ ಹಾಗೂ ಸಂಜಯ್ ನುಲಿ ನ್ಯಾಯಪೀಠವನ್ನು ಕೋರಿದರು.