ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ‘ನಿಮ್ಮ ಸಾಹಸಗಾಥೆಯನ್ನು ನೀವೇ ರಚಿಸಿ’ ಎಂಬ ಪ್ರಚಾರ ಆಂದೋಲನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಶನಿವಾರ ಚಾಲನೆ ನೀಡಿದರು.
‘ರಾಜ್ಯದ ಪ್ರವಾಸಿ ತಾಣಗಳನ್ನು ಪರಿಚಯಿಸಲು ಟಿವಿಸಿ, ಮುದ್ರಣ ಜಾಹೀರಾತು ಹಾಗೂ ಮಾರ್ಕೆಟಿಂಗ್ ಕೊಲ್ಯಾಟರ್ಸ್ಗಳನ್ನು ಒಳಗೊಂಡ ಈ ಕಾರ್ಯಕ್ರಮ ರೂಪಿಸಲಾಗಿದೆ. ಇದರ ಅಂಗವಾಗಿ ರೂಪಿಸಿದ ಕಿರುಚಿತ್ರ ಹಾಗೂ ಜಾಹೀರಾತುಗಳು ಅದ್ಭುತವಾಗಿ ಮೂಡಿಬಂದಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ‘ವಿಶ್ವ ಪಾರಂಪರಿಕ ತಾಣಗಳು, ರಾಷ್ಟ್ರೀಯ ಉದ್ಯಾನಗಳು, ಅಭಯಾರಣ್ಯಗಳು, ಗಿರಿಧಾಮಗಳು, ಜಲಪಾತಗಳು, ಬೀಚ್ಗಳಂತ ಸುಂದರ ತಾಣಗಳು ಪ್ರವಾಸಿಗರನ್ನು ಆಕರ್ಷಿಸುತ್ತವೆ. ಪ್ರವಾಸಿಗರಿಗೆ ರಾಜ್ಯದ ಪ್ರವಾಸ ನಿರಾಸೆ ಮೂಡಿಸದು’ ಎಂದರು.