<p><strong>ಬೆಂಗಳೂರು:</strong> ‘ವರ್ಗಾವಣೆ ದಂಧೆಯೇ ಭ್ರಷ್ಟಾಚಾರಕ್ಕೆ ಮೂಲ. ಇದನ್ನು ಮಟ್ಟ ಹಾಕಲು ಜನಪ್ರತಿನಿಧಿಗಳ ಸಹಕಾರ ಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ವಿಧಾನಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಲಂಚದಿಂದಾಗಿ ವ್ಯವಸ್ಥೆಯೇ ಹದಗೆಟ್ಟು ಹೋಗಿದೆ. ಜನಪ್ರತಿನಿಧಿಗಳಿಂದ ಮಾತ್ರ ಇದನ್ನು ಕೊನೆಗಾಣಿಸಲು ಸಾಧ್ಯ’ ಎಂದರು.</p>.<p>‘ಕೊಲೆ, ಸುಲಿಗೆ, ಅತ್ಯಾಚಾರ ಮುಂತಾದ ಘಟನೆಗಳಿಂದ ಮುಕ್ತಿ ಯಾವಾಗ? ಟಿ.ವಿಯಲ್ಲಿ ಬರುವ ವಿದ್ಯಮಾನ ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ’ ಎಂದು ಹೇಳಿದರು.</p>.<p><strong>ಪ್ರಾಮಾಣಿಕ ಮಾತು:</strong> ‘ವರ್ಗಾವಣೆ ದಂಧೆಯಿಂದ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬುದಾಗಿ ಮುಖ್ಯಮಂತ್ರಿಯವರು ಪ್ರಾಮಾಣಿಕ ಮಾತುಗಳನ್ನು ಆಡಿದ್ದಾರೆ. ಐಎಎಸ್, ಕೆಎಎಸ್ ಮತ್ತಿತರ ಅಧಿಕಾರಿಗಳು ಬೆಂಗಳೂರಿನಲ್ಲಿ ಪೋಸ್ಟಿಂಗ್ ಪಡೆಯಲು ₹8 ಕೋಟಿಯಿಂದ ₹10 ಕೋಟಿವರೆಗೆ ಹಣ ನೀಡುತ್ತಿದ್ದಾರೆ. ಈಗ ಈಟ್ ಇಂಡಿಯಾ ಕಂಪನಿಗಳು ದೋಚುತ್ತಿವೆ’ ಎಂದು ಜೆಡಿಎಸ್ನ ಎ.ಟಿ.ರಾಮಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವರ್ಗಾವಣೆ ದಂಧೆಯೇ ಭ್ರಷ್ಟಾಚಾರಕ್ಕೆ ಮೂಲ. ಇದನ್ನು ಮಟ್ಟ ಹಾಕಲು ಜನಪ್ರತಿನಿಧಿಗಳ ಸಹಕಾರ ಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ವಿಧಾನಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಲಂಚದಿಂದಾಗಿ ವ್ಯವಸ್ಥೆಯೇ ಹದಗೆಟ್ಟು ಹೋಗಿದೆ. ಜನಪ್ರತಿನಿಧಿಗಳಿಂದ ಮಾತ್ರ ಇದನ್ನು ಕೊನೆಗಾಣಿಸಲು ಸಾಧ್ಯ’ ಎಂದರು.</p>.<p>‘ಕೊಲೆ, ಸುಲಿಗೆ, ಅತ್ಯಾಚಾರ ಮುಂತಾದ ಘಟನೆಗಳಿಂದ ಮುಕ್ತಿ ಯಾವಾಗ? ಟಿ.ವಿಯಲ್ಲಿ ಬರುವ ವಿದ್ಯಮಾನ ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ’ ಎಂದು ಹೇಳಿದರು.</p>.<p><strong>ಪ್ರಾಮಾಣಿಕ ಮಾತು:</strong> ‘ವರ್ಗಾವಣೆ ದಂಧೆಯಿಂದ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬುದಾಗಿ ಮುಖ್ಯಮಂತ್ರಿಯವರು ಪ್ರಾಮಾಣಿಕ ಮಾತುಗಳನ್ನು ಆಡಿದ್ದಾರೆ. ಐಎಎಸ್, ಕೆಎಎಸ್ ಮತ್ತಿತರ ಅಧಿಕಾರಿಗಳು ಬೆಂಗಳೂರಿನಲ್ಲಿ ಪೋಸ್ಟಿಂಗ್ ಪಡೆಯಲು ₹8 ಕೋಟಿಯಿಂದ ₹10 ಕೋಟಿವರೆಗೆ ಹಣ ನೀಡುತ್ತಿದ್ದಾರೆ. ಈಗ ಈಟ್ ಇಂಡಿಯಾ ಕಂಪನಿಗಳು ದೋಚುತ್ತಿವೆ’ ಎಂದು ಜೆಡಿಎಸ್ನ ಎ.ಟಿ.ರಾಮಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>