ಮುಧೋಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಜನರು ಬಸ್ಗಳನ್ನು ಹತ್ತಲು ಇನ್ನೂ ಹಿಂಜರಿಯುತ್ತಿದ್ದಾರೆ. ಜೊತೆಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಬಸ್ಗಳಲ್ಲಿ ಆಸನ ಸಾಮರ್ಥ್ಯಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ರಿದೆ. ಹೀಗಾಗಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಸರ್ಕಾರದ ನೆರವು ಪಡೆಯುವುದು ಅನಿವಾರ್ಯ ಎಂದರು.