ಆ ಸಂದರ್ಭದಲ್ಲಿ ನಾಗಮಂಗಲದಲ್ಲಿ ಶಿವರಾಮೇಗೌಡರ ವಿರುದ್ಧ ಭಾರೀ ಪ್ರತಿಭಟನೆ ನಡೆದಿತ್ತು. ಪ್ರಗತಿಪರರು, ರೈತ ಮುಖಂಡರು, ನಾಗಮಂಗಲದ ಜನರು ಸೇರಿದ್ದರು. ಆ ಪ್ರತಿಭಟನೆಗೆ ಸ್ವಯಂ ಪ್ರೇರಣೆಯಿಂದ ಬಂದಿದ್ದ ಎಚ್.ಡಿ.ದೇವೇಗೌಡರು ಮುಂಚೂಣಿಯಲ್ಲಿ ನಿಂತು ಶಿವರಾಮೇಗೌಡರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದೂ ಅಲ್ಲದೆ, ಅವರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧವೂ ಹರಿಹಾಯ್ದಿದ್ದರು ಎಂದು ಜಾಲತಾಣಿಗರು ಟೀಕಿಸಿದ್ದಾರೆ.