<p><strong>ಬೆಂಗಳೂರು: </strong>ವಿಧಾನಸೌಧದಲ್ಲಿ 29 ಹಾಗೂ 30ರಂದು ಅಧಿವೇಶನ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p>ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಅಲೋಕ್ಕುಮಾರ್ ಆದೇಶ ಹೊರಡಿಸಿದ್ದು, ಜುಲೈ 29ರ ಬೆಳಿಗ್ಗೆ 6 ರಿಂದ ಜುಲೈ 30ರಂದು ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.</p>.<p>ವಿಧಾನಸೌಧ ಸುತ್ತಮುತ್ತ ಹಾಗೂ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಅವರ ಅನುಯಾಯಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆ ರೀತಿಯಾದರೆ ಪರಸ್ಪರ ಘರ್ಷಣೆ ಉಂಟಾಗಲಿದ್ದು, ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಶಾಂತಿ ಕಾಪಾಡುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p><strong>ನಗರದಾದ್ಯಂತ ಇವುಗಳಿಗೆ ನಿಷೇಧ:</strong></p>.<p>* ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ</p>.<p>* ಮೆರವಣಿಗೆ, ಪ್ರತಿಭಟನೆ, ಧರಣಿ ಮತ್ತು ಸಭೆ ನಡೆಸುವಂತಿಲ್ಲ</p>.<p>* ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ.</p>.<p>* ಯಾವುದೇ ಸ್ಫೋಟಕ ವಸ್ತುಗಳನ್ನು ಸಾಗಿಸುವಂತಿಲ್ಲ. ಇಟ್ಟುಕೊಳ್ಳುವಂತಿಲ್ಲ.</p>.<p>* ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವಂತಿಲ್ಲ. ಪ್ರಚೋದನಕಾರಿಯಾದ ಬಹಿರಂಗ ಘೋಷಣೆ ಕೂಗುವಂತಿಲ್ಲ. ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಬಿಡಿಸುವುದನ್ನು ನಿಷೇಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನಸೌಧದಲ್ಲಿ 29 ಹಾಗೂ 30ರಂದು ಅಧಿವೇಶನ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p>ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಅಲೋಕ್ಕುಮಾರ್ ಆದೇಶ ಹೊರಡಿಸಿದ್ದು, ಜುಲೈ 29ರ ಬೆಳಿಗ್ಗೆ 6 ರಿಂದ ಜುಲೈ 30ರಂದು ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.</p>.<p>ವಿಧಾನಸೌಧ ಸುತ್ತಮುತ್ತ ಹಾಗೂ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಅವರ ಅನುಯಾಯಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆ ರೀತಿಯಾದರೆ ಪರಸ್ಪರ ಘರ್ಷಣೆ ಉಂಟಾಗಲಿದ್ದು, ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಶಾಂತಿ ಕಾಪಾಡುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p><strong>ನಗರದಾದ್ಯಂತ ಇವುಗಳಿಗೆ ನಿಷೇಧ:</strong></p>.<p>* ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ</p>.<p>* ಮೆರವಣಿಗೆ, ಪ್ರತಿಭಟನೆ, ಧರಣಿ ಮತ್ತು ಸಭೆ ನಡೆಸುವಂತಿಲ್ಲ</p>.<p>* ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ.</p>.<p>* ಯಾವುದೇ ಸ್ಫೋಟಕ ವಸ್ತುಗಳನ್ನು ಸಾಗಿಸುವಂತಿಲ್ಲ. ಇಟ್ಟುಕೊಳ್ಳುವಂತಿಲ್ಲ.</p>.<p>* ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವಂತಿಲ್ಲ. ಪ್ರಚೋದನಕಾರಿಯಾದ ಬಹಿರಂಗ ಘೋಷಣೆ ಕೂಗುವಂತಿಲ್ಲ. ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಬಿಡಿಸುವುದನ್ನು ನಿಷೇಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>