ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಗುರುವಾರ ಭೇಟಿ ಮಾಡಿದ ನಾಗಾಭರಣ, ‘ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಆಂಧ್ರಪ್ರದೇಶದ ಸರ್ಕಾರ ಪ್ರತ್ಯೇಕ ಕಾಯ್ದೆ ಜಾರಿಮಾಡಿದೆ. ಅದೇ ರೀತಿ ರಾಜ್ಯದಲ್ಲಿ ಕೂಡ ಸಮಗ್ರ ಕಾಯ್ದೆ ಜಾರಿಮಾಡಬೇಕು. ಖಾಸಗಿ ವಲಯದಲ್ಲಿ ‘ಸಿ’ ಮತ್ತು ‘ಡಿ’ ವರ್ಗದ ಹುದ್ದೆಗಳನ್ನು ಸಂಪೂರ್ಣವಾಗಿ ಸ್ಥಳೀಯ ಕನ್ನಡಿಗರಿಗೆ ಮೀಸಲಿಡಬೇಕು’ ಎಂದು ಮನವಿ ಮಾಡಿದರು.