ತುಮಕೂರು:ಕೆ.ಎನ್.ರಾಜಣ್ಣ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸುವ ಮೂಲಕ ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡರ ಸೋಲಿಗೆ ಕಾರಣರಾಗಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಘಟಕವು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ದೂರು ನೀಡಿದೆ.
‘ಪಕ್ಷ ವಿರೋಧಿ ಚಟುವಟಿಗೆ ಮಾಡಿದ್ದಲ್ಲದೇ ಪಕ್ಷದ ಕಚೇರಿಗೆ ಬಂದು ತಮ್ಮ ವಿರುದ್ಧ ಮಾತನಾಡದಂತೆ ರಾಜಣ್ಣ ನಮಗೆಲ್ಲ ಬೆದರಿಕೆ ಹಾಕಿದ್ದಾರೆ. ಅವರನ್ನು ಪಕ್ಷದಿಂದ ಉಚ್ಚಾಟಿಸಲು ಆಗ್ರಹಿಸಿದ್ದೇವೆ’ ಎಂದು ಕಾಂಗ್ರೆಸ್ನ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಹೇಳಿದ್ದಾರೆ.
‘ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಎಲ್ಲರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಕೆಪಿಸಿಸಿ ವಕ್ತಾರ ಮುರಳಿಧರ ಹಾಲಪ್ಪ ಹೇಳಿದ್ದಾರೆ.